ಬಂಟ್ವಾಳ: ಮಾನಭಂಗಕ್ಕೆ ಯತ್ನಿಸಿ, ಜಾತಿ ನಿಂದನೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆರ್.ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಕಾರು ಚಾಲಕ ಯತಿರಾಜ್, ಚೇತನ್ ಹಾಗೂ ರಾಜೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನಲ್ಲಿ ಏನಿದೆ: ಜೂ. 11ರಂದು ಸಂಜೆ ಮನೆಗೆ ಏಕಾಏಕಿ ನುಗ್ಗಿದ ಯತಿರಾಜ್ ತಂಡದವರು ಕೈಯಲ್ಲಿ ಮರದ ದೊಣ್ಣೆ, ಕತ್ತಿ, ತಲವಾರು ಹಿಡಿದು ಹಲ್ಲೆ ಮಾಡಿ, ನನ್ನ ಮಕ್ಕಳನ್ನು ವಿಚಾರಿಸಿ ಅವರನ್ನು ಸಾಯಿಸುವುದಾಗಿ ಜೀವಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.
ಇನ್ನೂ ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆಯ ಮಕ್ಕಳು ಹಾಗೂ ಆರೋಪಿಗಳ ನಡುವಿನ ಹಳೆ ದ್ವೇಷವೇ ಇದಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.