News Karnataka Kannada
Saturday, May 11 2024
ಕರಾವಳಿ

ಮುಕ್ತ ಮಾರುಕಟ್ಟೆ  ಒಪ್ಪಂದ-ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ವಿರೋಧಿಸಿ ರೈತ ಸಂಘ ನಿರ್ಣಯ

Photo Credit :

ಮುಕ್ತ ಮಾರುಕಟ್ಟೆ  ಒಪ್ಪಂದ-ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ವಿರೋಧಿಸಿ ರೈತ ಸಂಘ ನಿರ್ಣಯ

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಸುಳ್ಯ ತಾಲೂಕು ಘಟಕದ ಸಭೆ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಕೆಂದ್ರ ಸರ್ಕಾರದ ಮುಕ್ತ ಮಾರುಕಟ್ಟೆ ಒಪ್ಪಂದಗಳು ಮತ್ತು ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವವನ್ನು ವಿರೋಧಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ವಿಚಾರ ಮಂಡಿಸಿ ರೈತ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದರು. ಈ ನಿರ್ಣಯದ ಪ್ರತಿಯನ್ನು  ಸುಳ್ಯದ ತಹಸೀಲ್ದಾರ್ ಮೂಲಕ ಜಿಲ್ಲಾಧಿಖಾರಿಗಳಿಗೆ ಹಾಗು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮುಖ್ಯ ಮಂತ್ರಿ ಹಾಗು ಪ್ರಧಾನಮಂತ್ರಿಗೂ ತಲುಪಿಸಲಾಗುವುದು ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ಈ  ಒಪ್ಪಂದಕ್ಕೆ ಸಹಿ ಹಾಕಬಾರದೆಂದು ತಿಳಿಸಲಾಗುವುದು. ದೇಶದಾದ್ಯಂತ 224 ರೈತ ಸಂಘಟನೆಗಳು ಈ ಒಪ್ಪಂದ ವಿರೋಧಿಸಿ ಹೋರಾಟ ನಡೆಸುತ್ತಿವೆ ಎಂದು ರವಿಕಿರಣ ಪುಣಚ ತಿಳಿಸಿದರು .

ಸಭೆಯಲ್ಲಿ ರೈತ ಸಂಘ ಸುಳ್ಯ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು, ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ, ಉಪಾಧ್ಯಕ್ಷ ಮುರಳೀಧರ ಅಡ್ಕಾರು, ಖಜಾಂಜಿ ದೇವಪ್ಪ ಕುಂದಲ್ಪಾಡಿ, ವಲಯ ಅದ್ಯಕ್ಷರಾದ ಲೋಕಯ್ಯ ಅತ್ಯಾಡಿ, ತೀರ್ಥರಮ ಉಳುವಾರು ಹಾಗು ಗ್ರಾಮ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು