ಮೂಡುಬಿದಿರೆ: ಇಲ್ಲಿನ ಬಳ್ಳಾಲ್ ಹೊಟೇಲ್ನ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್ ಅವರು ಗುರುವಾರ ಸಂವಾದ ಕಾರ್ಯಕ್ರಮವನ್ನು ನಡೆಸಿದರು.
ವಿವಿಧ ವಿಚಾರಗಳ ಬಗ್ಗೆ ನಡೆದ ಈ ಸಂವಾದ ಕಾರ್ಯಕ್ರಮದಲ್ಲಿ ವಕೀಲರು, ಇಂಜಿನಿಯರ್, ಚಾರ್ಟೆಡ್ ಅಕೌಂಟೆಂಟ್, ನಿವೃತ್ತ ಭಾರತೀಯ ಜೀವ ವಿಮಾ ನಿಗಮದ ಅಧಿಕಾರಿಗಳು, ನಿವೃತ್ತ ಅಧ್ಯಾಪಕರು, ವೈದ್ಯರು, ನಿವೃತ್ತ ಸರಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಮೂಡುಬಿದಿರೆ ಬಿಜೆಪಿ ಮಂಡಲದ ಅಧ್ಯಕ್ಷ ಈಶ್ವರ ಕಟೀಲು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನ್ಯಾಯವಾದಿ ಚೇತನ್ ಕುಮಾರ್ ಶೆಟ್ಟಿ ನಿರೂಪಿಸಿದರು.