ಮೂಡುಬಿದಿರೆ: ಕಳೆದ 14 ತಿಂಗಳುಗಳಿಂದ ಮೂಡುಬಿದಿರೆ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿತಾಲಕ್ಷ್ಮೀ ಅವರು ಮೂಡುಬಿದಿರೆಯಿಂದ ಮಂಗಳೂರಿಗೆ ವರ್ಗಾವಣೆಗೊಂಡು ಚುನಾವಣೆ ವಿಭಾಗದ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಬಡವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮೂಡುಬಿದಿರೆ ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದ್ದರು. ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ಮತ್ತು ಕೆಂಪು ಕಲ್ಲಿನ ಕೋರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುತ್ತಿದ್ದ ಅವರು ರಾಜಕರಣಿಗಳ ಕೆಂಗಣ್ಣಿಗೆ ಗುರಿಯಾಗಿ ಈ ಹಿಂದೆ ಎರಡು ಬಾರಿ ವರ್ಗಾವಣೆಗೆ ಪ್ರಯತ್ನಗಳಾಗಿತ್ತು.
ಆದರೆ ಕೋರ್ಟ್ ತಡೆ ನೀಡಿದ್ದರಿಂದ ವರ್ಗಾವಣೆ ಸ್ಥಗಿತಗೊಂಡಿತ್ತು. ಆದರೆ ಮತ್ತೆ ವರ್ಗಾವಣೆಯ ಪ್ರಯತ್ನ ಮುಂದುವರೆದಿದ್ದರಿಂದ ಇದೀಗ ವರ್ಗಾವಣೆಗೊಂಡಿದ್ದಾರೆ.
ಈ ಹಿಂದೆಯೂ ಮೂಡುಬಿದಿರೆಯಲ್ಲಿ ಪ್ರಭಾರ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದ ಗುರುಪ್ರಸಾದ್ ಮತ್ತೆ ತಾಲೂಕು ಪ್ರಭಾರ ತಹಶೀಲ್ದಾರ್ ಅಗಿ ನೇಮಕಗೊಂಡಿದ್ದಾರೆ.