News Karnataka Kannada
Sunday, April 28 2024
ಕರಾವಳಿ

ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ

Photo Credit :

ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ

ಮೂಡುಬಿದಿರೆ: ಕಳೆದ 14 ತಿಂಗಳುಗಳಿಂದ ಮೂಡುಬಿದಿರೆ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿತಾಲಕ್ಷ್ಮೀ ಅವರು ಮೂಡುಬಿದಿರೆಯಿಂದ ಮಂಗಳೂರಿಗೆ ವರ್ಗಾವಣೆಗೊಂಡು ಚುನಾವಣೆ ವಿಭಾಗದ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಬಡವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮೂಡುಬಿದಿರೆ ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದ್ದರು. ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ಮತ್ತು ಕೆಂಪು ಕಲ್ಲಿನ ಕೋರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುತ್ತಿದ್ದ ಅವರು ರಾಜಕರಣಿಗಳ ಕೆಂಗಣ್ಣಿಗೆ ಗುರಿಯಾಗಿ ಈ ಹಿಂದೆ ಎರಡು ಬಾರಿ ವರ್ಗಾವಣೆಗೆ ಪ್ರಯತ್ನಗಳಾಗಿತ್ತು.

ಆದರೆ ಕೋರ್ಟ್ ತಡೆ ನೀಡಿದ್ದರಿಂದ ವರ್ಗಾವಣೆ ಸ್ಥಗಿತಗೊಂಡಿತ್ತು. ಆದರೆ ಮತ್ತೆ ವರ್ಗಾವಣೆಯ ಪ್ರಯತ್ನ ಮುಂದುವರೆದಿದ್ದರಿಂದ ಇದೀಗ ವರ್ಗಾವಣೆಗೊಂಡಿದ್ದಾರೆ.

ಈ ಹಿಂದೆಯೂ ಮೂಡುಬಿದಿರೆಯಲ್ಲಿ ಪ್ರಭಾರ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದ ಗುರುಪ್ರಸಾದ್ ಮತ್ತೆ ತಾಲೂಕು ಪ್ರಭಾರ ತಹಶೀಲ್ದಾರ್ ಅಗಿ ನೇಮಕಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು