ಬೆಳ್ತಂಗಡಿ: ಮುಂಡಾಜೆ ಕಾಪಿನಬಾಗಿಲು ಸಮೀಪ ಮೃತ್ಯುಂಜಯ ನದಿಯಲ್ಲಿ ಮರಳುಗಾರಿಕೆಗೆ ಡ್ರೆಜ್ಜಿಂಗ್ ನಡೆಸಲು ಬಳಸಿದ ಬೋಟ್ ವಶಕ್ಕೆ ಪಡೆಯಲಾಗಿದೆ.
ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವತಿಯಿಂದ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದಾಗ ನದಿಯಲ್ಲಿ ಬೋಟ್ ಸಹಿತ ಡ್ರೆಜ್ಜಿಂಗ್ ಯಂತ್ರಗಳು ಪತ್ತೆಯಾಗಿತ್ತು.ತಕ್ಷಣ ಬೆಳ್ತಂಗಡಿ ಕಂದಾಯ ಇಲಾಖೆ ಸಹಿತ ಧರ್ಮಸ್ಥಳ ಪೊಲೀಸ್ ಠಾಣೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೋಟ್ ಸಹಿತ ಸೊತ್ತುಗಳು ಸೇರಿ ಅಂದಾಜು 3.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ತನಿಖೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಕ್ಸ್
ಮೃತ್ಯುಂಜಯ ಹಾಗೂ ನೇತ್ರಾವತಿ ನದಿಗಳ ಪ್ರದೇಶದಲ್ಲಿ ನಿರಂತರ ಮರಳುಗಾರಿಕೆ ನಡೆಯುತ್ತಿದೆ ಅನುಮತಿ ಪಡೆದು ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಚಾರ್ಮಾಡಿ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳು ಲಾರಿಗಳು ಅಹರ್ನಿಶಿ ರಾಜಾರೋಷವಾಗಿ ತಿರುಗಾಟ ನಡೆಸುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.