ಕಾಸರಗೋಡು: ಮೈಸೂರಿನಲ್ಲಿ ಪಿಕಪ್ ವ್ಯಾನ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಉಂಟಾದ ಅಪಘಾತದಲ್ಲಿ ಕಾಸರಗೋಡಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತಪಟ್ಟವರನ್ನು ಉಳಿಯತ್ತಡ್ಕದ ಜುನೈದ್ (26) ಮತ್ತು ಅಝರುದ್ದೀನ್(26) ಎಂದು ಗುರುತಿಸಲಾಗಿದೆ.
ಮೈಸೂರು-ಬೆಂಗಳೂರು ರಸ್ತೆಯ ಹುಣಸೂರು ಎಂಬಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರು. ಅಪಘಾತದ ರಭಸಕ್ಕೆ ಪಿಕಪ್ ವ್ಯಾನ್ ನಜ್ಜುಗುಜ್ಜಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಹರಸಾಹಸಪಟ್ಟು ಮೃತದೇಹಗಳನ್ನು ಹೊರತೆಗೆದರು.
ಇಬ್ಬರು ಸಾಮಗ್ರಿ ಖರೀದಿಗೆ ಬೆಂಗಳೂರಿಗೆ ತೆರಳಿದ್ದರು. ಮಂಗಳವಾರ ಬೆಳಗ್ಗೆ ಇಬ್ಬರೂ ಕಾಸರಗೋಡಿನಿಂದ ಪ್ರಯಾಣ ಬೆಳೆಸಿದ್ದರು. ಮಾಹಿತಿ ತಿಳಿದು ಸಂಬಂಧಿಕರು ಮೈಸೂರಿಗೆ ತೆರಳಿದ್ದು, ರಾತ್ರಿ ಮೃತದೇಹಗಳನ್ನು ಊರಿಗೆ ತರುವ ಸಾಧ್ಯತೆ ಇದೆ.