ಸುಳ್ಯ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಜ್ಞಾನದೀಪ ಯಕ್ಷಗಾನ ಕಲಾ ತಂಡದ ಉದ್ಘಾಟನೆ ಹಾಗೂ ತರಬೇತಿಗಳ ಆರಂಭ ನಡೆಯಿತು.
ಹಿರಿಯ ಯಕ್ಷಗಾನ ಕಲಾವಿದ ಹಾಗೂ ಮರ್ಕಂಜ ಪಂಚಸ್ಥಾಪನೆ ದೇವಸ್ಥಾನದ ಮಾಜಿ ಮೊಕ್ತೇಸರ ಯುವರಾಜ ಜೈನ್ ಉದ್ಘಾಟನೆ ನೆರವೇರಿಸಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ತಳೂರು ಅಧ್ಯಕ್ಷತೆ ವಹಿಸಿದ್ದರು.
ಯಕ್ಷಗಾನ ಗುರುಗಳಾದ ಶೇಖರ ಮಣಿಯಾಣಿ ಸುಳ್ಯ ಶುಭಹಾರೈಸಿದರು. ಯಕ್ಷಗುರು ರಾಧಾಕೃಷ್ಣ ಕಲ್ಲುಗುಂಡಿ ಪ್ರಾರ್ಥಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ನಿರ್ದೇಶಕರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಭಾಸ್ಕರ ರಾವ್ ಉಬರಡ್ಕ, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಪ್ರಾಥಮಿಕ ವಿಭಾಗದ ಮಖ್ಯೋಪಾಧ್ಯಾಯ ಪುನೀತ್ ರವಿ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿಯರಾದ ಹರ್ಷಿತಾ ಸ್ವಾಗತಿಸಿ, ಭಾರತಿ ವಂದಿಸಿದರು. ಪವಿತ್ರಾ ಕಾರ್ಯಕ್ರಮ ನಿರೂಪಿಸಿದರು.