ಯಮುನಾ ಡಿ ಅವರಿಗೆ ವಿದಾಯ

ಮಂಗಳೂರು:  ಕರ್ನಾಟಕ ಸರಕಾರದ ದಕ್ಷಿಣ ಕನ್ನಡ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಜಿಲ್ಲಾ ಸಬಲೀಕರಣ ಅಧಿಕಾರಿಯಾಗಿದ್ದು ಕೊಂಡು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಯಾಗಿ ವರ್ಗಾವಣೆ ಹೊಂದಿದ ಶ್ರೀಮತಿ ಯಮುನಾ ಡಿ ಇವರಿಗೆ ಮಂಗಳೂರಿನ ಸೈಂಟ್ ಆಗ್ನೆಸ್ ಸ್ಪೆಷಲ್ ಸ್ಕೂಲ್ ಇದರ ಸಭಾಭವನದಲ್ಲಿ ವಿದಾಯ ಸಮಾರಂಭವನ್ನು ಏರ್ಪಡಿಸಲಾಗಿತ್ತು.ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಶೇಷ ಶಾಲೆಗಳ ಮುಖ್ಯಸ್ಥರ ಹಾಗೂ ವಿಶೇಷ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳ, ದಕ್ಷಿಣ ಕನ್ನಡ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿಯವರ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಹಾಗೂ ಎಂ ಆರ್ ಡಬ್ಲ್ಯೂ, ವಿ ಆರ್ ಡಬ್ಲ್ಯೂ, ಇವರೆಲ್ಲರ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲಾಯಿತು.
ಶ್ರೀಮತಿ ಯಮುನಾ ಡಿ ಅವರ ಬಗ್ಗೆ ಸಾನಿಧ್ಯ ಶಾಲೆಯ ಡಾ. ವಸಂತ್ ಕುಮಾರ್ ಶೆಟ್ಟಿ, ಸ್ಪೂರ್ತಿ ವಿಶೇಷ ಶಾಲೆಯ ಶ್ರೀ ಪ್ರಕಾಶ್, ಲಯನ್ಸ್ ವಿಶೇಷ ಶಾಲೆಯ ಶ್ರೀಮತಿ ಮೀರಾ ಸತೀಶ್, ಸಾಂದೀಪ ವಿಶೇಷ ಶಾಲೆ ಸುಳ್ಯ ಇಲ್ಲಿನ ಶ್ರೀಮತಿ ಹರಿಣಿ ಸದಾಶಿವ ಇವರೆಲ್ಲರೂ ಗುಣಗಾನ ಮಾಡಿದರು.
ಬಳಿಕ ಎಲ್ಲ ವಿಭಾಗದಿಂದಲೂ ಶ್ರೀಮತಿ ಯಮುನಾ ಡಿ ರವರನ್ನು ಅಭಿನಂದಿಸಲಾಯಿತು.
ಅಭಿನಂದನೆಗೆ ಉತ್ತರಿಸಿದ ಶ್ರೀಮತಿ ಯಮುನಾ ಡಿ ಅವರು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ಶಕ್ತಿಮೀರಿ ಪ್ರಯತ್ನಿಸಿದ್ದೇನೆ. ರಾಜ್ಯದಲ್ಲಿ ಈ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ವಿಕಲಚೇತನರ ಸೇವೆಯಲ್ಲಿ ಪ್ರಥಮ ಸ್ಥಾನದಲ್ಲಿ ಇರಬೇಕೆಂಬುದು ನನ್ನ ಹಂಬಲ. ಆ ರೀತಿ ಗುರಿಯನ್ನು ಇರಿಸಿಕೊಂಡು ಓರ್ವ ಸರಕಾರಿ ಅಧಿಕಾರಿಯಾಗಿ ನನ್ನ ಕೆಲಸವನ್ನು ನಿರ್ವಹಿಸಿದ್ದೇನೆ. ನನ್ನ ಕೆಲಸವನ್ನು ನಿರ್ವಹಿಸಲು ನನ್ನ ಇಲಾಖೆ ಯ ಸಿಬ್ಬಂದಿ, ವಿಶೇಷ ಶಾಲೆಗಳ ಮುಖ್ಯಸ್ಥರು, ವಿ ಆರ್ ಡಬ್ಲ್ಯೂ, ಎಂ ಆರ್ ಡಬ್ಲ್ಯೂ, ಸಿಡಿಪಿಓ, ಎಲ್ಲರೂ ಸಹಕಾರವನ್ನು ನೀಡಿದ್ದೀರಿ. ಮತ್ತೊಮ್ಮೆ ನಿಮಗೆಲ್ಲರಿಗೂ ನನ್ನ ಹೃದಯಪೂರ್ವಕ ಅಭಿನಂದನೆಗಳು. ಎಂದು ಹೇಳಿದರು.
ಚೇತನ ವಿಶೇಷ ಶಾಲೆಯ ಶಿಕ್ಷಕ ವೃಂದ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಮತ್ತು ಶಿಕ್ಷಕೇತರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಶ್ರೀಮತಿ ರೇಷ್ಮಾ ಸೆರಾವೋ ಕಾರ್ಯಕ್ರಮ ನಿರೂಪಿಸಿದರು. ಸೆಂಟ್ ಆಗ್ನೆಸ್ ವಿಶೇಷ ಶಾಲೆಯ ಪ್ರಾಂಶುಪಾಲೆ ಸಿ| ಮರಿಯ ಶೃತಿ ಅವರು ಸ್ವಾಗತಿಸಿದರು. ಕ್ರಿಸ್ತ ರಾಜ ನವಚೇತನ ವಿಶೇಷ ಶಾಲೆ ವೇಣೂರು ಇಲ್ಲಿನ ಪ್ರಾಂಶುಪಾಲೆ
ಸಿ| ಶಾಲೆಟ್ ಪಿಂಟೋ ವಂದಿಸಿದರುಶ್ರೀಮತಿ ಯಮುನಾ ಡಿ ರವರು ಎಲ್ಲರಿಗೂ ಭೋಜನದ ವ್ಯವಸ್ಥೆಯನ್ನು ಮಾಡಿದ್ದರು.

Swathi MG

Recent Posts

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

1 min ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

12 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

16 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

27 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

57 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

2 hours ago