News Karnataka Kannada
Friday, May 03 2024
ಕರಾವಳಿ

ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿರ್ವಹಿಸುವೆ: ಅಂಗಾರ

Kukke Angara 06082021
Photo Credit :

ಮಂಗಳೂರು: ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಪ್ರಥಮವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರನ್ನು ಕುಕ್ಕೆ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಗೋಪುರದ ಬಳಿಯಿಂದಲೇ ಶ್ರೀ ದೇವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಸಚಿವರಿಗೆ ಹಾರ ಹಾಕಿ ಶಾಲು ಹೊದಿಸಿ ದೇವರ ಪ್ರಸಾದ ನೀಡಿದರು. ಬಳಿಕ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಮುಖಂಡರು ಸಚಿವರನ್ನು ಅಭಿನಂದಿಸಿದರು.

‘ಪಕ್ಷದ ಮತ್ತು ಸಂಘಟನೆಯ ಹಿರಿಯರು ಎರಡನೇ ಬಾರಿಗೆ ನನಗೆ ಅವಕಾಶ ಮಾಡಿಕೊಟ್ಟಿರುತ್ತಾರೆ. ಅವರು ಕೊಟ್ಟಿರುವ ಗುರುತರ ಜವಬ್ದಾರಿಯನ್ನು ಹಿರಿಯರ ಅಪೇಕ್ಷೆಗೆ ತಕ್ಕಂತೆ ನಿರ್ವಹಿಸುತ್ತೇನೆ. ಪ್ರಾಮಾಣಿಕವಾಗಿ ಮತ್ತು ಶಕ್ತಿ ಮೀರಿ ಸೇವೆ ನೆರವೇರಿಸಿ ನನಗೆ ನೀಡಿರುವ ಅವಕಾಶವನ್ನು ಸದುಪಯೋಗಪಡಿಸುತ್ತೇನೆ. ಹಿರಿಯರು ನನ್ನ ಮೇಲೆ ಇರಿಸಿರುವ ವಿಶ್ವಾಸ ಮತ್ತು ಪ್ರೀತಿಗೆ ತಕ್ಕುದಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಇಡೀ ರಾಜ್ಯದಲ್ಲಿ ನನಗೆ ದೊರಕುವ ಇಲಾಖೆಗೆ ಸಂಬಂಧಿಸಿದ ಮತ್ತು ಪಕ್ಷಕ್ಕೆ ಸಂಬಂಧಿಸಿದ ಕಾರ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತೇನೆ. ರಾಜ್ಯದ ಜನತೆಯ ಅಭಿವೃದ್ಧಿಗೆ ಪೂರಕವಾಗಿ ಶ್ರಮವಹಿಸಿ ದುಡಿಯುತ್ತೇನೆ.ಅದರೊಂದಿಗೆ ಸಂಘಟನೆಯ ಬಲವರ್ಧನೆಗೆ ಕೂಡಾ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ’ ಎಂದು ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಸಚಿವ ಎಸ್.ಅಂಗಾರ ಹೇಳಿದರು.

ದೇವಳದ ಎಇಒ ಪುಷ್ಪಲತಾ ರಾವ್, ಪ್ರಮುಖರಾದ ಹರೀಶ್ ಕಂಜಿಪಿಲಿ, ದಿನೇಶ್ ಸಂಪ್ಯಾಡಿ, ರಾಜೇಶ್ ಎನ್.ಎಸ್, ಚಿದಾನಂದ ಕಂದಡ್ಕ, ವೆಂಕಟೇಶ್ ಎಚ್.ಎಲ್, ಅಚ್ಚುತ್ತ ಗೌಡ, ವೆಂಕಟೇಶ್ ಎಚ್.ಎಲ್, ಭಾರತಿ ದಿನೇಶ್, ಗಿರಿಧರ್ ಸ್ಕಂಧ, ಶಿವರಾಮ ನೆಕ್ರಾಜೆ, ದಿವ್ಯಾ ಯಶೋಧ ಕೃಷ್ಣ ಸೇರಿದಂತೆ ಪ್ರಮುಖರು ಹಾಗೂ ಶ್ರೀ ದೇವಳದ ಸಿಬ್ಬಂದಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು