ಸುಳ್ಯ: ಯುವಾ ಬ್ರಿಗೇಡ್ ಸಂಘಟನೆಯ ವತಿಯಿಂದ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯ ನಾಳೆಯಿಂದ ಎರಡು ದಿನಗಳ ಕಾಲ ನಡೆಯಲಿದೆ.
27 ಮತ್ತು 28 ರಂದು ನಡೆಯುವ ಸ್ವಚ್ಛತಾ ಕಾರ್ಯದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಯುವ ಬ್ರಿಗೇಡ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಯುವ ಬ್ರಿಗೇಡ್ ವತಿಯಿಂದ ಈ ಹಿಂದೆ ಕಾವೇರಿ ನದಿ, ಧರ್ಮಸ್ಥಳದಲ್ಲಿ ನೇತ್ರಾವತಿ, ಕಟೀಲಿನ ನಂದಿನಿ ಸೇರಿದಂತೆ ರಾಜ್ಯದ ಪ್ರಮುಖ ಏಳು ನದಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಿದ್ದರು.
ನದಿಯ ಬದಿಯಲ್ಲಿ ಮತ್ತು ನೀರಿನಲ್ಲಿ ಹಾಕಿರುವ ಮಾಲಿನ್ಯಗಳನ್ನು ತೆಗೆದು ನದಿಯನ್ನು ಸ್ವಚ್ಛಗೊಳಿಸಲಾಗುವುದು. ಯುವ ಬ್ರಿಗೇಡ್ನ ಮಾರ್ಗದರ್ಶಕರಾದ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಡೆಯುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಯುವ ಬ್ರಿಗೇಡ್ ಪ್ರಕಟಣೆ ತಿಳಿಸಿದೆ.