ಉಜಿರೆ: ಉಜಿರೆ ಶ್ರೀ ಧ.ಮ. ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹಾಗೂ ಕ್ರೀಡಾಪಟು ರಕ್ಷಿತ್ ಅಸ್ಸಾಂನಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮೂಡಬಿದರೆ ಆಳ್ವಾಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 36ನೇ ಕರ್ನಾಟಕ ರಾಜ್ಯ ಅಮೆಚೂರ್ ಅಥ್ಲೆಟಿಕ್ ಕ್ರೀಡಾಕೂಟ 2021ರ ನೂರು ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಕ್ಷಿತ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪಾಲ್ಗೊಳ್ಳುವ ಅರ್ಹತೆ ಪಡೆದಿದ್ದಾರೆ.