ಕಾಸರಗೋಡು: ಲಾರಿ ಕಂದಕಕ್ಕೆ ಉರುಳಿ ಚಾಲಕ ಮೃತಪಟ್ಟು, ಕ್ಲೀನರ್ ಗಂಭೀರವಾಗಿ ಗಾಯಗೊಂಡ ಘಟನೆ ಮಂಜೇಶ್ವರ ಸಮೀಪದ ಮಜಿಬೈಲ್ ನಲ್ಲಿ ಮಂಗಳವಾರ ನಡೆದಿದೆ.
ಮೃತಪಟ್ಟವರನ್ನು ಮಂಗಲ್ಪಾಡಿ ಪುಳಿಕುತ್ತಿಯ ಪ್ರಕಾಶ್ ( 38) ಎಂದು ಗುರುತಿಸಲಾಗಿದೆ. ಕ್ಲೀನರ್ ಮಂಜೇಶ್ವರದ ಶರೀಫ್ ( 32) ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಜಿಬೈಲು ಸಮೀಪದ ಪಜಿಂಗಾರು ಎಂಬಲ್ಲಿನ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಲಾರಿಯು ಮೀಯಪದವಿನಿಂದ ಕೆಂಪು ಕಲ್ಲು ಗಳನ್ನು ಹೇರಿಕೊಂಡು ಹೊಸಂಗಡಿಗೆ ಹೊಸಂಗಡಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಸುಮಾರು 60 ಅಡಿ ಆಳದ ಕಂದಕಕ್ಕೆ ಮಗುಚಿ ಬಿದ್ದಿದೆ. ಲಾರಿಯಡಿಯಲ್ಲಿ ಸಿಲುಕಿದ್ದ ಚಾಲಕ ಪ್ರಕಾಶ್ ಹಾಗೂ ಕ್ಲೀನರ್ ಶರೀಫ್ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಇಬ್ಬರನ್ನು ಹೊರತೆಗೆದು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಪ್ರಕಾಶ್ ದಾರಿಮಧ್ಯೆ ಮೃತಪಟ್ಟರು. ಮೃತದೇಹವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ…
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಕುಮಾರಿ…
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬ ಕುರಿತು ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ನನ್ನ ಆತ್ಮೀಯ ಸ್ನೇಹಿತ. ಅಂತಹ ಸ್ವಭಾವದ ಹುಡುಗ ಅಲ್ಲ. ಪ್ರಜ್ವಲ್ ಅವರ ಮೇಲಿನ ಪ್ರಕರಣ ಸತ್ಯನೋ ಸುಳ್ಳೋ…
ಕಾಂಗ್ರೆಸ್ ಸರ್ಕಾರ ಕೊಲೆಗಡಕರನ್ನು ಬಂಧನ ಮಾಡಬೇಕು ಅಂದ್ರೆ ನೂರು ಬಾರಿ ಯೋಚನೆ ಮಾಡುತ್ತಾರೆ. ಲವ್ ಜಿಹಾದ್ ನಲ್ಲಿ ತಪಿತಸ್ಥರನ್ನು ಒಳಗೆ…
'ಸಂವಿಧಾನ ಬದಲಿಸಲು ನಿರ್ಧರಿಸಿದ ಬಿಜೆಪಿಯನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ, ಜನಪರವಾಗಿ ಕೆಲಸ ಮಾಡುವ ಇಚ್ಛೆ ಹೊಂದಿರುವ ಕಾಂಗ್ರೆಸ್…