News Karnataka Kannada
Sunday, May 12 2024
ಕರಾವಳಿ

ಲಾರಿ ಪಲ್ಟಿ: ಬಸ್ ತಂಗುದಾಣದಲ್ಲಿ ನಿಂತಿದ್ದ ವ್ಯಕ್ತಿ ಗಂಭೀರ

Photo Credit :

ಲಾರಿ ಪಲ್ಟಿ: ಬಸ್ ತಂಗುದಾಣದಲ್ಲಿ ನಿಂತಿದ್ದ ವ್ಯಕ್ತಿ ಗಂಭೀರ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಬಸ್ಸು ತಂಗುದಾಣ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಪಕ್ಕಕ್ಕೆ ಉರುಳಿಬಿದ್ದ ಘಟನೆ ಮಂಗಳವಾರ ಮಧ್ಯಾಹ್ನ  ಬಿ.ಸಿ.ರೋಡು ಸಮೀಪದ ತಲಪಾಡಿಯಲ್ಲಿ ನಡೆದಿದೆ.


ಘಟನೆಯಲ್ಲಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕುಪ್ಪಿಲ ನಿವಾಸಿ ಸತೀಶ್ ಶೆಟ್ಟಿ (38) ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಲ್ಲಂಗಡಿ ಹಣ್ಣು ಸಾಗಾಟದ ಲಾರಿ ತಲಪಾಡಿ ಸಮೀಪ್ ಚಾಲಕ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯ ತೀರಾ ಎಡಭಾಗಕ್ಕೆ ಚಲಿಸಿದ್ದು, ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಬಸ್ ತಂಗುದಾಣದಲ್ಲಿ ನಿಂತಿದ್ದ  ಸತೀಶ್ ಎಂಬವರಿಗೆ ತೀವ್ರ ತರಹದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ತೀವ್ರತೆಗೆ ಬಸ್ ತಂಗುದಾಣ ಸಂಪೂರ್ಣ ಜಖಂಗೊಂಡಿದ್ದು, ಬಳಿಕ ಬಸ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬವೂ ಮುರಿದು ಬಿದ್ದಿದೆ. ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದು, ಗಾಯಾಳು ಸತೀಶ್ ರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರಯ್ಯ, ವೃತ್ತ ನಿರೀಕ್ಷಕ  ಬೆಳ್ಳಿಯಪ್ಪ  ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು