ಉಡುಪಿ: ಮುನಿಯಾಲು ಸರಕಾರಿ ಪದವಿಪೂರ್ವ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿಗೆ ಅದೇ ಶಾಲೆಯ ಇಬ್ಬರು ಶಿಕ್ಷಕರು ಸೆ.14ರಂದು ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ಶಾಲಾ ಪ್ರಾಂಶುಪಾಲರಿಗೆ ಮತ್ತು ಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು.
ಆದರೆ ಶಿಕ್ಷಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇದ್ದುದ್ದರಿಂದ ವಿದ್ಯಾರ್ಥಿನಿ ಪೋಷಕರು ಶನಿವಾರ ಬೆಳಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಶಿಕ್ಷಕರಾದ ಮಂಜುನಾಥ್ ಮತ್ತು ಸುಧೀಂದ್ರ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದು, ಅವರ ವಿರೋಧ ಕ್ರಮಕೈಗೊಳ್ಳದ ಪ್ರಾಂಶುಪಾಲ ರಾಮಕೃಷ್ಣ ಹೆಗ್ಡೆ ಮತ್ತು ಡಿಡಿಪಿಐ ಶೇಷಶಯನ ವಿರುದ್ಧ ಹೆಬ್ರಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಕಾರ್ಕಳ ಡಿಎಸ್ಪಿ ಬೆಳ್ಳಿಯಪ್ಪ ತನಿಖೆ ನಡೆಸುತ್ತಿದ್ದಾರೆ.