Categories: ಕರಾವಳಿ

ವೆಬ್‍ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳ ರಚನೆ  ರಾಜ್ಯಮಟ್ಟದ ಕಾರ್ಯಾಗಾರ

ಉಜಿರೆ: ಸಾಮಾಜಿಕ ಜಾಲತಾಣವನ್ನು ಸಕಾರಾತ್ಮಕವಾಗಿ ಬಳಸಿಕೊಂಡು ಯುವಕರು ತಮ್ಮ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು. ಮಾನವನ ಅಭಿವೃದ್ಧಿಯಲ್ಲಿ, ಸಾಮಾಜಿಕ ಜಾಲತಾಣ ಅತ್ಯಂತ ಪ್ರಬಲವಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಒಳಿತು-ಕೆಡುಕು ಅಪ್ರಸ್ತುತ. ಎಲ್ಲಾ ಕ್ಷೇತ್ರಗಳಲ್ಲಿ ಅದರದ್ದೇ ಆದ ಒಳಿತು ಕೆಡುಕುಗಳಿವೆ. ನಾವು ಅದನ್ನು ವ್ಯವಸ್ಥಿತವಾಗಿ ಅರಿತು ಬಳಸಬೇಕು ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ, ಎಸ್ ಸತೀಶ್ಚಂದ್ರ ಹೇಳಿದರು.

ಇವರು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಆಯೋಜಿಸಿದ ವೆಬ್‍ಸೈಟ್ ಹಾಗೂ ಸಾಮಾಜಿಕ ಜಾಲತಾಣಗಳ ರಚನೆ ಕುರಿತು ರಾಜ್ಯ ಮಟ್ಟದ  ಮೂರು ದಿನಗಳ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ ಜಾಲತಾಣ ಎಂಬುದು ಒಂದು ಸಾಗರವಿದ್ದಂತೆ. ಇದರ ವಿಸ್ತಾರವನ್ನು ಸಾಗರದ ಆಳಕ್ಕೆ ಹೋಲಿಸಬಹುದು. ಪ್ರಸ್ತುತ ಸಾಮಾಜಿಕ ಜಾಲತಾಣವು ಅದ್ಭುತವಾಗಿ ಕಾರ್ಯನಿರ್ವಹಿಸುತ್ತಿದೆ. ಹೊಸ ಶಿಕ್ಷಣ ನೀತಿಯಲ್ಲಿ ಇದರ ಅರಿವು ಅಗತ್ಯ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣ ಉತ್ತಮ ರೀತಿಯಲ್ಲಿ ಬಳಸುವುದು ಒಂದು ಕಲೆ. ಇದು ಪ್ರಪಂಚದ ಆಗು-ಹೋಗುಗಳಿಗೆ ಚಲನಾಶಕ್ತಿಯಾಗಿದೆ. ಜಗತ್ತಿನಾದ್ಯಂತ ಜನರ ಬೆಳವಣಿಗೆಗೆ ತೆರೆಯ ಹಿಂದೆ ಪ್ರಬಲವಾಗಿ ಕೆಲಸ ನಿರ್ವಹಿಸುತ್ತಿದೆ. ಆದ್ದರಿಂದ ಅದರ ಕುರಿತು ಬಳಕೆದಾರರಿಗೆ ಸೂಕ್ತ ಜ್ಞಾನ ಅಗತ್ಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ್ ಹೆಗಡೆ, ನವ ಮಾಧ್ಯಮ ಇಂದು ಎಲ್ಲಾ ಕ್ಷೇತ್ರಗಳತ್ತಲೂ ವಿಸ್ತರಿಸಿದೆ. ಉದ್ಯೋಗಾಕಾಂಕ್ಷಿಗಳು ಅವಶ್ಯ ಮೂಲಭೂತ ಜ್ಞಾನದೊಂದಿಗೆ ನವ ಮಾಧ್ಯಮದ ತಾಂತ್ರಿಕ ಕೌಶಲ್ಯವೂ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರವು ಕೌಶಲ್ಯಾಭಿವೃದ್ಧಿಯ ತರಬೇತಿಯಾಗಿ ಅವಶ್ಯ ಪ್ರಾತ್ಯಕಿಕೆಯನ್ನು ನೀಡುವ ಉದ್ದೇಶ ಹೊಂದಿದೆ ಎಂದರು.

ಕನ್ನಡ ನ್ಯೂಸ್ ನೌ ಡಾಟ್ ಕಾಂ ಸಂಪಾದಕ ವಸಂತ್ ಬಿ ಈಶ್ವರಗೆರೆ ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕಿಯಾಗಿ ಭಾಗವಹಿಸಿದರು. ಮೂರು ದಿನಗಳ ಕಾರ್ಯಾಗಾರದಲ್ಲಿ ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್ ಚಾನೆಲ್ ರಚನೆ ಹಾಗೂ ನಿರ್ವಹಣೆ, ಆದಾಯ ಗಳಿಕೆ, ಪೇಸ್ ಬುಕ್ ಸಮುದಾಯ ಪುಟದ ರಚನೆ ಹಾಗೂ ನಿರ್ವಹಣೆ, ವೆಬ್ ಸೈಟ್ ರಚನೆ, ನಿರ್ವಹಣೆ ಹಾಗೂ ಆದಾಯ ಗಳಿಕೆ ಕುರಿತು ವಿಸ್ತೃತ ಪ್ರಾತ್ಯಕ್ಷಿಕೆ ನೀಡಲಾಯಿತು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ  ಪತ್ರಕರ್ತರು ಸೇರಿದಂತೆ ಒಟ್ಟು 98 ಮಂದಿ ಭಾಗವಹಿಸಿದ್ದರು.

ಈ ಸಮಾರಂಭದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ್ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಗೀತಾ ಎ.ಜೆ ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿನಿಯರಾದ ವರ್ಷಾ ಪ್ರಭು, ವಿಧಾತ್ರಿ ಭಟ್, ವಾಣಿ ಭಟ್ ಹಾಘೂ ಚೈತ್ರಾ  ನಿರೂಪಿಸಿದರು.

Desk

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

7 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

14 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

26 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

36 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

56 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago