ಪುತ್ತೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪುತ್ತೂರಿನ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಬೆಳಿಗ್ಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿ ವಿಧಾನ ಸೌಧದಲ್ಲಿ ಪ್ರಧಾನಿ ನರೇಂದ್ರ ಮೋದಿವಯರಿಗೆ ಸಹಾಯಕ ಕಮೀಷನರ್ ಮೂಲಕ ಮನವಿ ಸಲ್ಲಿಸಲಾಯಿತು.
ಕೊಲ್ಕತ್ತದಲ್ಲಿ ವೈದ್ಯರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸರಕಾರ ಯಾವುದೇ ಕ್ರಮ ಕೈಗೊಳ್ಳದ ಮತ್ತು ವೈದ್ಯರ, ವೈದ್ಯಕೀಯೇತರ ಸಿಬಂದಿ ಮೇಲೆ ಹಲ್ಲೆ ತಡೆಗಟ್ಟಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಖಾಸಗಿ ವೈದ್ಯರುಗಳು ಒಪಿಡಿಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಗಣೇಶ್ ಮುದ್ರಾಜೆ, ಕಾರ್ಯದರ್ಶಿ ಡಾ. ಅಶೋಕ್ ಸೇರಿದಂತೆ ಇತರ ಆಸ್ಪತ್ರೆಗಳ ವೈದ್ಯರಿಗಳು ಭಾಗವಹಿಸಿದ್ದರು.