ಮಂಗಳೂರು: ವ್ಯಾಪಾರಿ ರಾಜಕಾರಣದಿಂದ ಪ್ರಜಾಕಾರಣದತ್ತ ಪ್ರಜಾಪ್ರಭುತ್ವಕ್ಕೊಂದು ಹೊಸ ಆಯಾಮ ನೀಡುವ ಉದ್ದೇಶದಿಂದ ಪ್ರಜಾಕೀಯದ ಪ್ರಯತ್ನವಾಗಿದೆ ಎಂದು ಉತ್ತಮ ಪ್ರಜಾಕೀಯ ಮುಖ್ಯಸ್ಥ, ನಟ ಉಪೇಂದ್ರ ತಿಳಿಸಿದ್ದಾರೆ.
ಬುಧವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಉಪೇಂದ್ರ ಅವರು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಈಗಾಗಲೇ 14 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ಹೇಳಿದ್ದಾರೆ.
ಮಂಗಳೂರು ಲೋಕಸಭಾ ಕ್ಷೇತ್ರದಿಂದ ಪ್ರಜಾಕೀಯ ಪಕ್ಷದಿಂದ ವಿಜಯ್ ಶ್ರೀನಿವಾಸ್ ಅವರು ಸ್ಪರ್ಧಿಸುತ್ತಿದ್ದಾರೆ. ಪ್ರಚಾರದ ವೇಳೆ ಜನರಿಗೆ ಕರಪತ್ರಗಳನ್ನು ನೀಡಿ ಅವರ ಬೇಡಿಕೆ ಸಂಗ್ರಹಿಸುತ್ತೇವೆ. ಆಡಳಿತ ವರ್ಗದ ಮುಂದಿಟ್ಟು ಚರ್ಚಿಸಿ ಸಿದ್ಧಪಡಿಸಿದ ಯೋಜನೆಗಳನ್ನು ಜನತೆಯ ಮುಂದಿಡುತ್ತೇವೆ ಎಂದರು.