News Karnataka Kannada
Friday, May 17 2024
ಕರಾವಳಿ

ಶಾಂತಿವನ: ಆನ್‍ಲೈನ್ ಬುಕಿಂಗ್ ವ್ಯವಸ್ಥೆಗೆ ಚಾಲನೆ

Photo Credit :

ಶಾಂತಿವನ: ಆನ್‍ಲೈನ್ ಬುಕಿಂಗ್ ವ್ಯವಸ್ಥೆಗೆ ಚಾಲನೆ

ಬೆಳ್ತಂಗಡಿ: ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ ಶಾಂತಿವನದಲ್ಲಿ ಚಿಕಿತ್ಸೆ ಪಡೆಯಲಿಚ್ಛಿಸುವವರಿಗೆ ಅನುಕೂಲವಾಗಲು ರೂಪಿತವಾದ ಆನ್‍ಲೈನ್ ಬುಕಿಂಗ್ ವ್ಯವಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಬುಧವಾರ ಚಾಲನೆ ನೀಡಿದರು.

ಆನ್‍ಲೈನ್ ಬುಕಿಂಗ್ ವ್ಯವಸ್ಥೆಗೆ ಸಂಬಂಧಿತ ತಾಂತ್ರಿಕ ನಿರ್ವಹಣೆಯ ಜವಾಬ್ದಾರಿಯನ್ನು ಧರ್ಮಸ್ಥಳ ಶ್ರೇಯಸ್‍ಕುಮಾರ್, ನಿಶ್ಚಲ್ ಡಿ ಅವರ ಮಾರ್ಗದರ್ಶನದಲ್ಲಿ ವೈರ್‍ಕ್ಯಾಂಪ್ ಎಂಬ ಸಂಸ್ಥೆ ನಿರ್ವಹಿಸಿದೆ. ಈ ಮೂಲಕ ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯಲು ಇಚ್ಛಿಸುವವರಿಗೆ ಆರೋಗ್ಯ ಸಂಬಂಧಿತ ವಿವರವನ್ನು ನೀಡಿ ಚಿಕಿತ್ಸೆಯ ದಿನಾಂಕ ಮತ್ತು ಲಭ್ಯತೆಯ ವಿವರಗಳನ್ನು ದೃಢಪಡಿಸಿಕೊಳ್ಳಬಹುದಾಗಿದೆ.

ಹತ್ತು ದಿನಗಳಿಂದ ಆರು ತಿಂಗಳವರೆಗಿನ ಅವಧಿಯ ಚಿಕಿತ್ಸೆಗಾಗಿ ಬುಕಿಂಗ್ ಮಾಡುವ ಅವಕಾಶವಿದೆ.ಚಿಕಿತ್ಸಾಲಯದ ವೆಬೈಸೈಟ್‍ಗೆ(ತಿತಿತಿ.ಟಿಚಿಣuಡಿeಛಿuಡಿe.oಡಿg.iಟಿ)ಭೇಟಿ ನೀಡಿ ಚಿಕಿತ್ಸೆ ಪಡೆಯಲಿಚ್ಛಿಸುವ ದಿನಾಂಕ ನಮೂದಿಸಿ ಲಭ್ಯ ಕೊಠಡಿಗಳ ವಿವರಗಳನ್ನು ಪಡೆಯಬಹುದು.

ತದನಂತರ ಚಿಕಿತ್ಸೆ ಪಡೆಯಲಿರುವ ವ್ಯಕ್ತಿಯ ಆರೋಗ್ಯ ಸಂಬಂಧಿತ ಹಿಂದಿನ ದಾಖಲೆಗಳನ್ನು ಅಪ್‍ಲೋಡ್ ಮಾಡಬೇಕು. ಸಂಬಂಧಿಸಿದ ತಜ್ಞವೈದ್ಯರು ಈ ದಾಖಲೆಗಳನ್ನು ಪರಿಶೀಲಿಸಿ ಚಿಕಿತ್ಸೆಯ ಸಮ್ಮತಿ ಸೂಚಿಸುತ್ತಾರೆ. ಇದರ ದೃಢೀಕೃತ ಪ್ರತಿಯನ್ನು ಚಿಕಿತ್ಸೆ ಆರಂಭವಾಗುವ ದಿನದಂದು ಸಲ್ಲಿಸಬೇಕಾಗುತ್ತದೆ.

ಆರಂಭಿಕ ಒಂದು ತಿಂಗಳು ಆನ್‍ಲೈನ್ ಬುಕಿಂಗ್ ಪ್ರಕ್ರಿಯೆಯು ಪ್ರಾಯೋಗಿಕವಾಗಿ ನಿರ್ವಹಿಸಲ್ಪಡಲಿದೆ. ಆನ್‍ಲೈನ್ ಬುಕಿಂಗ್ ವ್ಯವಸ್ಥೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ಹೆಗ್ಗಡೆ, ಡಿ.ಹಷೇಂದ್ರಕುಮಾರ್, ಸುಪ್ರಿಯಾ ಹಷೇಂದ್ರಕುಮಾರ್,  ಪೂರಣ್ ವರ್ಮಾ, ಸೀತಾರಾಮ್ ತೋಳ್ಪಡಿತ್ತಾಯ, ಡಾ.ಪ್ರಶಾಂತ್ ಉಪಸ್ಥಿತರಿದ್ದರು.

ಪೋಟೊ-16ಶಾಂತಿವನ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು