ಉಡುಪಿ: ಶಿರೂರು ಸ್ವಾಮೀಜಿ ಅವರ ಅಂತಿಮಕ್ರಿಯೆಯಲ್ಲಿ ಭಾಗವಹಿಸದೆ ಇದ್ದ ಪೇಜಾವರ ಮಠಾಧೀಶರಾಗಿರುವ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಇಂದು ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ.
ಶುಕ್ರವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಪಾದರಿಗೆ ಸ್ತ್ರೀ ಸಂಗ ಮತ್ತು ಮದ್ಯಪಾನ ಮಾಡುತ್ತಿದ್ದರು ಎಂದು ಹೇಳಿ ವಿವಾದವನ್ನು ಉಂಟು ಮಾಡಿದ್ದಾರೆ.
ಶಿರೂರು ಶ್ರೀಗಳಿಗೆ ಯೌವನದಲ್ಲಿ ಸ್ತ್ರಿಯರ ಸಂಗವಿತ್ತು. ಮಠಾಧೀಶರಿಗೆ ಎಲ್ಲರಿಗೂ ಮಕ್ಕಳಿದ್ದಾರೆ ಎಂದು ಶಿರೂರು ಶ್ರೀಗಳು ಹೇಳಿರುವುದು ಎಲ್ಲರಿಗೂ ನೋವುಂಟು ಮಾಡಿತ್ತು. ಶಿರೂರು ಶ್ರೀಗಳಿಗೆ ಮಕ್ಕಳಿದ್ದಾರೆ ಎನ್ನುವ ವಿಚಾರವನ್ನು ವ್ಯಕ್ತಿಯೊಬ್ಬರು ಹೇಳಿದ್ದರು. ಆದರೆ ಇದು ಸತ್ಯವೆಂದು ಹೇಳಲು ಸಾಧ್ಯವಿಲ್ಲವೆಂದು ಪೇಜಾವರ ಶ್ರೀ ತಿಳಿಸಿದರು.
ಶಿರೂರು ಶ್ರೀಗಳು ವಿಪರೀತ ಮದ್ಯಪಾನ ಮಾಡುತ್ತಲಿದ್ದರು. ಇದನ್ನು ನಿಲ್ಲಿಸುವಂತೆ ನಾನೇ ಅವರಿಗೆ ಹೇಳಿದ್ದೆ. ಸ್ತ್ರೀಸಂಗ ಮಾಡಿ ಸನ್ಯಾಸ ಧರ್ಮ ಮೀರಿದ್ದರು ಎಂದರು.
ಆದರೆ ಅವರಲ್ಲಿ ಕೆಲವು ಒಳ್ಳೆಯ ಗುಣಗಳು ಕೂಡ ಇದ್ದವು. ವಿದ್ಯಾರ್ಥಿಗಳಿಗೆ ನೆರವು ನೀಡುತ್ತಲಿದ್ದರು. ಬ್ರಾಹ್ಮಣರಲ್ಲದವರ ಜತೆ ಸೇರಿ ಕೆಲವು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…
ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಐಯ್ಯರ್ ಹೇಳಿಕೆಗೆ…
2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…