News Karnataka Kannada
Sunday, May 05 2024
ಕರಾವಳಿ

ಶಿರೂರು ಸ್ವಾಮೀಜಿ ಅಂತಿಮ ದರ್ಶನ ಪಡೆದ ಸಾವಿರಾರು ಭಕ್ತರು

Photo Credit :

ಶಿರೂರು ಸ್ವಾಮೀಜಿ ಅಂತಿಮ ದರ್ಶನ ಪಡೆದ ಸಾವಿರಾರು ಭಕ್ತರು

ಉಡುಪಿ: ಅಸಹಜವಾಗಿ ಸಾವನ್ನಪ್ಪಿರುವ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರು ಶರೀರವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಗುರುವಾರ ಸಂಜೆ ಶಿರೂರು ಮಠಕ್ಕೆ ತರಲಾಯಿತು.

ಮರಣೋತ್ತರ ಪರೀಕ್ಷೆಯು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಡೆದ ಬಳಿಕ ಶ್ರೀಗಳ ಪಾರ್ಥಿವ ಶರೀರವನ್ನು ಮಠಕ್ಕೆ ಹಸ್ತಾಂತರಿಸಲಾಯಿತು. ಇದರ ಬಳಿಕ ಮಧ್ವ ಸರೋವರದಲ್ಲಿ ಸ್ನಾನ ಮಾಡಿಸಿ, ಕೃಷ್ಣಮಠಕ್ಕೆ ತರಲಾಯಿತು.

ಕೃಷ್ಣನ ದರ್ಶನಗೈದ ಬಳಿಕ ಶಿರೂರು ಮಠದ ಗುಡಿಯ ಮುಂಭಾಗದಲ್ಲಿ ಇರಿಸಿ ಪೂಜೆ ಸಲ್ಲಿಸಿದ ಬಳಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ಅಂತಿಮ ದರ್ಶನ ಪಡೆದುಕೊಂಡರು.

ಹಿರಿಯಡ್ಕ ಮೂಲ ಮಠದಲ್ಲಿ ಬೃಂದಾವನ ನಿರ್ಮಿಸಿ ಅದರಲ್ಲಿ ಉಪ್ಪು, ಹತ್ತಿ, ಕಾಳುಮೆಣಸು, ಕರ್ಪೂರಗಳನ್ನು ತುಂಬಿಸಿ ಸಮಾಧಿ ಮಾಡಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು