ಉಡುಪಿ: ಅಸಹಜವಾಗಿ ಸಾವನ್ನಪ್ಪಿರುವ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರು ಶರೀರವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಗುರುವಾರ ಸಂಜೆ ಶಿರೂರು ಮಠಕ್ಕೆ ತರಲಾಯಿತು.
ಮರಣೋತ್ತರ ಪರೀಕ್ಷೆಯು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಡೆದ ಬಳಿಕ ಶ್ರೀಗಳ ಪಾರ್ಥಿವ ಶರೀರವನ್ನು ಮಠಕ್ಕೆ ಹಸ್ತಾಂತರಿಸಲಾಯಿತು. ಇದರ ಬಳಿಕ ಮಧ್ವ ಸರೋವರದಲ್ಲಿ ಸ್ನಾನ ಮಾಡಿಸಿ, ಕೃಷ್ಣಮಠಕ್ಕೆ ತರಲಾಯಿತು.
ಕೃಷ್ಣನ ದರ್ಶನಗೈದ ಬಳಿಕ ಶಿರೂರು ಮಠದ ಗುಡಿಯ ಮುಂಭಾಗದಲ್ಲಿ ಇರಿಸಿ ಪೂಜೆ ಸಲ್ಲಿಸಿದ ಬಳಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ಅಂತಿಮ ದರ್ಶನ ಪಡೆದುಕೊಂಡರು.
ಹಿರಿಯಡ್ಕ ಮೂಲ ಮಠದಲ್ಲಿ ಬೃಂದಾವನ ನಿರ್ಮಿಸಿ ಅದರಲ್ಲಿ ಉಪ್ಪು, ಹತ್ತಿ, ಕಾಳುಮೆಣಸು, ಕರ್ಪೂರಗಳನ್ನು ತುಂಬಿಸಿ ಸಮಾಧಿ ಮಾಡಲಾಗುವುದು.