ಮಂಗಳೂರು: ಗುರುವಾರ ರಾತ್ರಿ ಸಚಿವ ಬಿ.ರಮಾನಾಥ ರೈ ಅವರ ಆಪ್ತ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಅವರ ಮನೆ ಮೇಲೆ ಬಿಜೆಪಿ ಕಾರ್ಯಕರ್ತರ ಗುಂಪು ದಾಳಿ ನಡೆಸಿ ಪೂಜಾರಿ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅದಲ್ಲದೆ ಆರೋಪಿಗಳು ಬಿಎಂಡಬ್ಲ್ಯು ಸೇರಿದಂತೆ ಎರಡು ಕಾರುಗಳ ಮೇಲೆ ಕಲ್ಲು ಎತ್ತಿ ಹಾಕಿ ಪುಡಿ ಮಾಡಿದ್ದಾರೆ. ಮನೆ ಮೇಲೆ ಕಲ್ಲನ್ನು ಎತ್ತಿ ಹಾಕಿದ್ದಾರೆ.
ಈ ಘಟನೆ ಗುರುವಾರ ರಾತ್ರಿ 11.30ರ ಸುಮಾರಿಗೆ ಬಂಟ್ವಾಳ ಸಮೀಪದ ಮೆಲ್ಕಾರ್ ನಲ್ಲಿ ನಡೆದಿದೆ.
ನಮ್ಮ ಮೇಲೆ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಘಟಕದ ಉಪಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಅವರ ಗುಂಪು ತಮ್ಮ ಕೊಲೆಗೆ ಯತ್ನಿಸಿದೆ ಎಂದು ಸಂಜೀವ ಪೂಜಾರಿ ಬಂಟ್ವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂಜೀವ ಪೂಜಾರಿ ಹಾಗೂ ಅವರ ಪತ್ನಿ ಮತ್ತು ಕೆಲವು ಕಾಂಗ್ರೆಸ್ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಆರೋಪಿಗಳನ್ನು ತಡೆಯಲು ಹೋದ ಸ್ನೇಹಿತರನ್ನು ಕಾರಿನಿಂದ ಹೊರಕ್ಕೆ ಎಳೆದು ಹಲ್ಲೆ ನಡೆಸಿದ ವೇಳೆ ರಕ್ಷಣೆಗೆ ಬಂದ ಪತ್ನಿ ವಸಂತಿ ಮೇಲೂ ಹಲ್ಲೆ ನಡೆಸಿದ್ದಾರೆ. ಅವರನ್ನು ಬಿಡಿಸಲು ಬಂದ ಪತ್ನಿ ವಸಂತಿ ಮೇಲೂ ಹಲ್ಲೆ ಮಾಡಿದರು ಎಂದರು.
ಪತ್ನಿ ಮೇಲೆ ಹಲ್ಲೆಗೆ ಯತ್ನಿಸಿದಾಗ ನಾನು ತಡೆಯಲು ಹೋದಾಗ ಆಗ ನನ್ನನ್ನು ಮನೆಯಿಂದ ಹೊರಕ್ಕೆ ಎಳೆದು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವಿಚಾರವನ್ನು ಪೊಲೀಸರಿಗೆ ತಿಳಿಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಹೇಳಿದರು.