ಪುತ್ತೂರು : ಹಾರಾಡಿ ಎಂಬಲ್ಲಿ ರಸ್ತೆ ಬದಿಯಲ್ಲಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಭಂಗ ಮಾಡಿದ ಆರೋಪದಲ್ಲಿ ಫೆ.14ರಂದು ಪುತ್ತೂರು ನಗರ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಾರಾಡಿ ನಿವಾಸಿ ಅಹ್ಮದ್ ಪಿ ಅವರ ಪುತ್ರ ಅಬ್ದುಲ್ ರಝಾಕ್ (56ವ)ಮತ್ತು ಅವರ ಸಹೋದರ ಅಶ್ರಫ್ ಎಂಬವರ ಪುತ್ರ ಮಹಮ್ಮದ್ ಶಾಫಿ.ಎಚ್ (21ವ) ಬಂಧಿತ ಆರೋಪಿಗಳು.
ಆರೋಪಿಗಳಾದ ಅಬ್ದುಲ್ ರಝಾಕ್ ಮತ್ತು ಮಹಮ್ಮದ್ ಶಾಫಿ ಎಂಬವರು ಗುರುವಾರ ಬೆಳಿಗ್ಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಹಾರಾಡಿ ರಸ್ತೆ ಬದಿಯಲ್ಲಿ ಪರಸ್ಪರ ಹೊಡೆದಾಡಿಕೊಂಡು, ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದಿಸಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರ ಶಾಂತಿಭಂಗ ಎಸಗಿದ ಆರೋಪದಲ್ಲಿ ಪುತ್ತೂರು ನಗರ ಠಾಣೆಯ ಎಸ್ಐ ರುಕ್ಮಯ್ಯ ಮೂಲ್ಯ ಅವರು ಪ್ರಕರಣ ದಾಖಲಿಸಿಕೊಂಡು, ಅವರಿಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.