ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಫ್ರೆಂಡ್ಸ್ ಕ್ಲಬ್ ಪೈಲಾರು ಸಹಯೋಗದಲ್ಲಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿಯವರ 80ನೇ ಹುಟ್ಟುಹಬ್ಬದ ಪ್ರಯುಕ್ತ ಸುಬ್ರಾಯ ಚೊಕ್ಕಾಡಿ ಬದುಕು, ಬರಹ-ಒಂದು ಅವಲೋಕನ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.
ಚೊಕ್ಕಾಡಿಯವರು ರಚಿಸಿದ `ಕಲ್ಲುಮಂಟಪ’ ಕವನ ಸಂಕಲನವನ್ನು ಉಪನ್ಯಾಸಕ ಡಾ.ಪೂವಪ್ಪ ಕಣಿಯೂರು ಬಿಡುಗಡೆ ಮಾಡಿದರು. ತಾನು ಅನುಭವಿಸಿದ ಕಠಿಣ ಸನ್ನಿವೇಶಗಳನ್ನು ಸೃಜನಶೀಲವಾಗಿ ಅಭಿವ್ಯಕ್ತಿಸಿದ ಕವಿ ಸುಬ್ರಾಯ ಚೊಕ್ಕಾಡಿಯವರು. ಬರೆಯಲು ಆರಂಭಿಸಿದಾಗಿನ ಹೊಸತನ ಈಗಲೂ ಅವರ ಕವಿತೆಗಳಲ್ಲಿ ಕಾಣುತ್ತದೆ. ಪರಿಸರದ ನಡುವಿನ ಜೀವನ ಅವರನ್ನು ಮತ್ತಷ್ಟು ವಿದ್ವತ್ಪೂರ್ಣವಾಗಿಸಿದೆ ಎಂದು ಅವರು ಹೇಳಿದರು.
ಚೊಕ್ಕಾಡಿಯವರ ಬಗೆಗಿನ ಅಭಿನಂದನಾ ಗ್ರಂಥ `ವಿಹಂಗಮ’ವನ್ನು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು ಬಿಡುಗಡೆಗೊಳಿಸಿದರು. ಸಾಹಿತ್ಯ ಪರಿಷತ್ತು ಮತ್ತು ಫ್ರೆಂಡ್ಸ್ ಕ್ಲಬ್ ವತಿಯಿಂದ ಸುಬ್ರಾಯ ಚೊಕ್ಕಾಡಿಯವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಚೊಕ್ಕಾಡಿಯವರು ಯಾವುದಕ್ಕೂ ಹಂಬಲಿಸಿ ಬರೆದವನಲ್ಲ ನಾನು. ನನ್ನ ಪರಿಸರ ನನ್ನ ಬರವಣಿಗೆಗೆ ಸ್ಫೂರ್ತಿಯನ್ನೊದಗಿಸಿತು ಎಂದು ಹೇಳಿದರು.
ಬರಹಗಾರ ಅರವಿಂದ ಚೊಕ್ಕಾಡಿ ಮುಖ್ಯ ಅತಿಥಿಯಾಗಿದ್ದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸುಬ್ರಾಯ ಚೊಕ್ಕಾಡಿಯವರ ಪತ್ನಿ ಲಕ್ಷ್ಮೀ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಕೋಶಾಧಿಕಾರಿ ದಯಾನಂದ ಆಳ್ವ, ಚೊಕ್ಕಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಮೂಕಮಲೆ ಉಪಸ್ಥಿತರಿದ್ದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಚಂದ್ರಶೇಖರ ಪೇರಾಲು ಸ್ವಾಗತಿಸಿ, ತೇಜಸ್ವಿ ಕಡಪಳ ವಂದಿಸಿದರು. ಚರಿಷ್ಮಾ ಕಡಪಳ ಪ್ರಾರ್ಥಿಸಿ, ಸುಶ್ಮಿತಾ ಕಡಪಳ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಗಾಯಕ ರಮೇಶ್ ಮೆಟ್ಟಿನಡ್ಕರವರಿಂದ ಸುಬ್ರಾಯ ಚೊಕ್ಕಾಡಿಯವರ ಗೀತೆಗಳ ಗಾಯನ ಕಾರ್ಯಕ್ರಮ ಜರಗಿತು.
ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…
ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ ಶಾಸಕರ ಅಚೀವ್ ಮೆಂಟ್…
ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್ ಗಾಂಧಿ ಹೇಳಿದರು.
ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…
ನಗರದ ಹೊರವಲಯದ ಗುರುಪುರ ಕೈಕಂಬದಲ್ಲಿ ನಿರ್ಮಾಣ ಆಗಲಿರುವ ಮೆಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು .ಕಾಮಗಾರಿ ವಿರುದ್ಧದ ಸ್ಥಳೀಯರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾಮಗಾರಿ…