ಸುಳ್ಯ: ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ನೂತನ ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು ಹಾಗೂ ಉಪಾಧ್ಯಕ್ಷರಾಗಿ ನವೀನ್ಕುಮಾರ್ ಸಾರಕರೆ ಅವಿರೋಧವಾಗಿ ಆಯ್ಕೆಯಾಗಿದ್ದರೆ.
ಎಪಿಎಂಸಿ ಆಡಳಿತ ಮಂಡಳಿಯ ಮೂರನೇ ಅವಧಿಗೆ 20 ತಿಂಗಳಿಗೆ ನೂತನ ಸಾರಥಿಗಳ ಆಯ್ಕೆ ನಡೆಯಿತು. ಅಧ್ಯಕ್ಷ-ಉಪಾಧ್ಯಕ್ಷತೆಗೆ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿರುವುದರಿಂದ ಅವಿರೋಧ ಆಯ್ಕೆ ನಡೆಯಿತು. ಸುಳ್ಯ ತಹಶೀಲ್ದಾರ್ ಅನಂತ ಶಂಕರ್ ಚುನಾವಣಾಧಿಕಾರಿಯಾಗಿದ್ದರು. ಎಪಿಎಂಸಿ ಕಾರ್ಯದರ್ಶಿ ನಿರಂಜನ ಹಿರೇಮಠ್ ಸ್ವಾಗತಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕರಾದ ದೀಪಕ್ ಕುತ್ತಮೊಟ್ಟೆ, ದೇರಣ್ಣ ಗೌಡ ಅಡ್ಡಂತಡ್ಕ, ಜಯಪ್ರಕಾಶ್ ಕುಂಚಡ್ಕ, ಬಾಲಕೃಷ್ಣ, ಜಯಲಕ್ಷ್ಮಿ, ಸುಕನ್ಯ ಭಟ್, ಮೋನಪ್ಪ ಬೊಳ್ಳಾಜೆ, ಗಣೇಶ್ ಭಟ್.ಕೆ.ಎಸ್, ಸಂತೋಷ್ ಜಾಕೆ, ಸುಂದರ ನೆಹರೂನಗರ, ಆದಂ ಹಾಜಿ ಕಮ್ಮಾಡಿ, ನಾರಾಯಣ ಬಂಟ್ರಬೈಲು, ಉಮೇಶ್ ಎ.ಬಿ. ಇದ್ದರು.
ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎ.ವಿ.ತೀರ್ಥರಾಮ, ಎಪಿಎಂಸಿ ಮಾಜಿ ಅಧ್ಯಕ್ಷ ಜಯರಾಮ ಹಾಡಿಕಲ್ಲು, ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಮಡಪ್ಪಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ, ದಿಲೀಪ್ ಬಾಬ್ಲುಬೆಟ್ಟು ಮತ್ತಿತರರು ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.