Categories: ಕರಾವಳಿ

ಸ್ಫೋಟ ಸ್ಥಳದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ: ತನಿಖೆ ಚುರುಕು

ಕಾರವಾರ: ಹೊನ್ನಾವರದ ಹೊಸಾಡದಲ್ಲಿ ಸೋಮವಾರ ಸ್ಪೋಟಕ ಸಿಡಿದ ಪ್ರದೇಶದಲ್ಲಿ ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿದೆ. ಇದರೊಂದಿಗೆ ಸುತ್ತಲಿನ ಗಿಡ-ಮರಗಳ ಮೇಲೆ ಬಿಳಿ ಬಣ್ಣದ ಪುಡಿಗಳು ಕಂಡು ಬಂದಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಹೇಳಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು 80 ರಿಂದ 100 ಮೀಟರ್ ಅಂತರದಲ್ಲಿ ಈ ವಸ್ತು ಪತ್ತೆಯಾಗಿದ್ದು, ಬಾಂಬ್ ನಿಷ್ಕ್ರೀಯ ದಳದವರು ವಸ್ತುವಿನ ಕುರಿತು ಅಧ್ಯಯನ ನಡೆಸುತ್ತಿದ್ದಾರೆ.

ನ್ಯಾಯಾಲಯದ ಅನುಮತಿ ಪಡೆದ ನಂತರ ಬಾಂಬ್ ನಿಷ್ಕ್ರೀಯ ದಳದವರು ಪಂಚನಾಮೆ ನಡೆಸಿ ದೊರೆತಿರುವ ವಸ್ತುವಿನ ಕುರಿತು ಪೊಲೀಸ್ ಇಲಾಖೆಗೆ ವರದಿ ನೀಡಲಿದ್ದಾರೆ. ಈಗಾಗಲೇ ಬಾಂಬ್ ನಿಷ್ಕ್ರೀಯ ದಳದವರು ಗಾಯಾಳುವಿನ ರಕ್ತದ ಮಾದರಿ, ಬಟ್ಟೆ ಹಾಗೂ ಸ್ಥಳದಲ್ಲಿ ಕೆಲ ಕುರುಹುಗಳನ್ನು ಸಂಗ್ರಹಿಸಿದ್ದಾರೆ.

ಆರೋಪಿತ ಗಾಯಾಳು ರೈಮಂಡ್ ಕೈತಾನ್ ಮಿರಾಂಡ್‌ಗೆ ಪ್ರಜ್ಞೆ ಬಂದಿದ್ದು, ವೈದ್ಯರ ಇನ್ನಷ್ಟು ಆರೈಕೆಯ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ಯಾವುದೇ ವಿಚಾರಣೆ ನಡೆಸಿಲ್ಲ. ಘಟನೆಗೆ ಸಂಬಂಧಿಸಿದಂತೆ ಪೀಟರ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಾಸಕ ಮಂಕಾಳು ವೈದ್ಯರಿಗೆ ಈಗಾಗಲೇ ಇಬ್ಬರು ಗನ್‌ಮ್ಯಾನ್‌ಗಳಿದ್ದು, ಅವರು ಏರಿದ್ದ ವೇದಿಕೆ ಸಮೀಪದಲ್ಲಿ ಸ್ಪೋಟಕ ಸಿಡಿದ ನಂತರ ಇನ್ನಷ್ಟು ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Desk

Recent Posts

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

10 mins ago

13 ವರ್ಷದ ಬಾಲಕಿ ಜೊತೆ 70ರ ವೃದ್ಧ ಮದುವೆ: ತಂದೆ, ವರ ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯನ್ನು  70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

54 mins ago

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಶಿಕ್ಷಕರ ವಜಾಕ್ಕೆ ತಡೆ ನೀಡಿದ ಸುಪ್ರೀಂ

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್‌…

1 hour ago

ಪ್ರಜ್ವಲ್ ನನ್ನು ದೇಶದಿಂದ ಆಚೆ ಬಿಟ್ಟು ನಮ್ಮಂತವರ ಬಂಧನ ಎಂದ ಕೆ. ಕವಿತಾ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಭಾರೀ ಸುದ್ದಿಯಾಗುತ್ತಿದ್ದು, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಬರೀ ರಾಜ್ಯದಲ್ಲಷ್ಟೇ ಅಲ್ಲ…

2 hours ago

‘ಕಾಂತಾರ’ ಪ್ರೀಕ್ವೆಲ್‌ ಶೂಟಿಂಗ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು ಬೈಂದೂರಿನ ಕೆರಾಡಿಯಲ್ಲಿ…

2 hours ago

ಇವಿಎಂಗೆ ಬೆಂಕಿ ಹಚ್ಚಿದ ಯುವಕ: ಪೊಲೀಸರ ವಶಕ್ಕೆ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

2 hours ago