News Karnataka Kannada
Saturday, April 27 2024
ಬೆಂಗಳೂರು

ಹಾರ ಬೇಡ ಕನ್ನಡ ಪುಸ್ತಕ ಕೊಡಿ: ಸಚಿವ ಸುನೀಲ್ ಕುಮಾರ್

Sunil Kumar 07082021
Photo Credit :

ಬೆಂಗಳೂರು: ‘ನನ್ನನ್ನು ಅಭಿನಂದಿಸಲು ಬರುವವರು ಹಾರ– ತುರಾಯಿಗಳನ್ನು ತರುವುದು ಬೇಡ. ಕೊಡಲೇಬೇಕು ಎಂದಿದ್ದರೆ, ಒಂದು ಕನ್ನಡ ಪುಸ್ತಕ ಕೊಡಿ’ ಎಂದು ಕಾರ್ಕಳ ಶಾಸಕ, ನೂತನ ಸಚಿವ ವಿ.ಸುನೀಲ್‌ಕುಮಾರ್‌ ತಿಳಿಸಿದ್ದಾರೆ.

‘ನೀವು ಕೊಟ್ಟ ಪುಸ್ತಕವನ್ನು ಕಾರ್ಕಳದ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡುತ್ತೇನೆ. ಇದರಿಂದ ನನ್ನ ಮತ ಕ್ಷೇತ್ರದ ವಿದ್ಯಾರ್ಥಿಗಳಿಗೆ ಮತ್ತು ಜ್ಞಾನ ದಾಹಿಗಳಿಗೆ ಪ್ರಯೋಜನ ಆಗುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹಾರ ತುರಾಯಿಗಳನ್ನು ನೀಡಬಾರದು. ಅದರ ಬದಲಿಗೆ ಒಂದು ಕೆ.ಜಿ ‘ಕಾರ್ಲ ಕಜೆ’ ಎಂಬ ಸ್ಥಳೀಯ ತಳಿಯ ಕೆಂಪು ಅಕ್ಕಿಯನ್ನು ನೀಡುವಂತೆ ಸುನೀಲ್‌ ಸಲಹೆ ನೀಡಿದ್ದೂ ಅಲ್ಲದೆ, ಅಕ್ಕಿಯನ್ನು ಕೊಡುಗೆಯಾಗಿ ನೀಡುವ ಪರಿಪಾಟವನ್ನೂ ಆರಂಭಿಸಿದರು. ಈ ಬಾರಿ ಮುಂಗಾರು ಆರಂಭದಲ್ಲಿ ಕಾರ್ಕಳ ಮೂಲದ ಬಿಳಿ ಬೆಂಡೆ ಬೀಜವನ್ನು ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಿ ಅದನ್ನು ಎಲ್ಲರೂ ಬೆಳೆಯುವಂತೆ ಪ್ರೋತ್ಸಾಹ ನೀಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು