News Karnataka Kannada
Saturday, May 04 2024
ಕರಾವಳಿ

ಹಿಂದೂ ಸಂಘಟನೆಗಳ ಕಾರ್ಯಕರ್ತನಿಗೆ ಹಲ್ಲೆ: ಚೈತ್ರಾ ಕುಂದಾಪುರ ಸೇರಿದಂತೆ 6 ಮಂದಿ ಅರೆಸ್ಟ್

Photo Credit :

 ಹಿಂದೂ ಸಂಘಟನೆಗಳ ಕಾರ್ಯಕರ್ತನಿಗೆ ಹಲ್ಲೆ: ಚೈತ್ರಾ ಕುಂದಾಪುರ ಸೇರಿದಂತೆ 6 ಮಂದಿ ಅರೆಸ್ಟ್

ಸುಳ್ಯ: ಸುಬ್ರಹ್ಮಣ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ಉಂಟಾದ ಘರ್ಷಣೆಗೆ ಸಂಬಂಧಿಸಿ ಬಂಧಿತರಾದ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಇತರ ಆರು ಮಂದಿಗೆ ಸುಳ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಚೈತ್ರಾ ಕುಂದಾಪುರ ಅವರ ತಂಡ ಹಾಗು ಸುಳ್ಯ ತಾಲೂಕು ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ನೇತೃತ್ವದ ತಂಡದ ಮಧ್ಯೆ ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಘರ್ಷಣೆ ನಡೆದಿತ್ತು. ಘಟನೆಗೆ ಸಂಬಂಧಪಟ್ಟು ಇತ್ತಂಡಗಳ ಕಾರ್ಯಕರ್ತರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟು ಪೊಲೀಸರು ಚೈತ್ರಾ ಕುಂದಾಪುರ, ಸುದಿನ, ವಿನಯ, ಮಣಿಕಂಟ, ನಿಖಿಲ್, ಹರೀಶ್ ಖಾರ್ವಿ ಮತ್ತು ಹರೀಶ್ ನಾಯಕ್ ಎಂಬವರನ್ನು ಬಂಧಿಸಿ ಗುರುವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗಳಿಗೆ ನವೆಂಬರ್ 3ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಚೈತ್ರಾ ಕುಂದಾಪುರ ನೀಡಿರುವ ದೂರಿನಂತೆ ಗುರುಪ್ರಸಾದ್ ಪಂಜ ಮತ್ತು ತಂಡದ ಮೇಲೆ ಕೂಡ ಪ್ರಕರಣ ದಾಖಲಿಸಲಾಗಿದ್ದು ತನಿಖೆ ಮುಂದುವರಿದಿದೆ. ಈ ಮಧ್ಯೆ ಘರ್ಷಣೆ ವೇಳೆ ಗಾಯಗೊಂಡು ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುಪ್ರಸಾದ್ ಪಂಜನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಆರ್.ಸತೀಶ್‍ಕುಮಾರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು