News Karnataka Kannada
Sunday, April 28 2024
ಕರಾವಳಿ

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ, ಮಡಿದವರಿಗೆ ಶ್ರದ್ಧಾಂಜಲಿ

13 years since Mangalore plane crash, Tribute to those who died
Photo Credit :

ಮಂಗಳೂರು: ಮಂಗಳೂರು ವಿಮಾನ ದುರಂತಕ್ಕೆ 13 ವರುಷ…  2010 ಮೇ.22ರಂದು ಮಂಗಳೂರಿನ ಕೆಂಜಾರು ಎಂಬಲ್ಲಿ ಟೇಬಲ್ ಟಾಪ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಪ್ರಪಾತಕ್ಕೆ ಬಿದ್ದಿತ್ತು. ಪೈಲಟ್ ನಿದ್ದೆಗೆ ಜಾರಿದ್ದು ಇದಕ್ಕೆ ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿತ್ತು. ದುರಂತ ನಡೆದು ಇಂದಿಗೆ 13 ವರ್ಷವಾಗಿದ್ದು, ಇಂದಿಗೆ ಸರಿಯಾಗಿ 13 ವರ್ಷಗಳ ಹಿಂದೆ ಮಂಗಳೂರು ಬಜಪೆ ಸಮೀಪ ಕೆಂಜಾರು ಎಂಬಲ್ಲಿ ನಡೆದ ದುರ್ಘಟನೆಯಲ್ಲಿ  158 ಮಂದಿ ಸುಟ್ಟು ಕರಕಲಾಗಿದ್ದರು. 135 ಮಂದಿ ವಯಸ್ಕರು, 19 ಮಕ್ಕಳು, 4 ಶಿಶುಗಳು, 6 ಮಂದಿ ವಿಮಾನ ಸಿಬ್ಬಂದಿ ಸೇರಿ 166 ಮಂದಿ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್,  ಅಂದು ಬೆಳಗ್ಗೆ 6.15ಕ್ಕೆ ವಿಮಾನ ಅಪಘಾತಕ್ಕೀಡಾಯಿತು. ದುರಂತದಲ್ಲಿ ಪೈಲಟ್, ಸಿಬಂದಿ ಸೇರಿ 158 ಮಂದಿ ಸಾವನ್ನಪ್ಪಿದ್ದರು. ಮೃತಪಟ್ಟವರಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯವರಲ್ಲದೆ, ಕೇರಳದವರೂ ಸಾಕಷ್ಟು ಸಂಖ್ಯೆಯಲ್ಲಿದ್ದರು.

ದುಬೈನಿಂದ ರಾತ್ರಿ 1.20ಕ್ಕೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹೊರಟಿತ್ತು. ಬೆಳಗ್ಗೆ ಸುರಕ್ಷಿತವಾಗಿ ಮಂಗಳೂರು ತಲುಪಬೇಕಿತ್ತು. ಮಂಗಳೂರಿನ ಹೊರವಲಯದ ಕೆಂಜಾರು ವಿಮಾನ ನಿಲ್ದಾಣ ಲ್ಯಾಂಡ್ ಆಗುವ ಸಂದರ್ಭ ಟೇಬಲ್ ಟಾಪ್ ಲ್ಯಾಂಡಿಂಗ್ ನಲ್ಲಿ ಲೆಕ್ಕಾಚಾರ ತಪ್ಪಿ, ರನ್ ವೇಯಿಂದ ಜಾರಿ ಕಣಿವೆಗೆ ವಿಮಾನ ಭಾರೀ ಸದ್ದಿನೊಂದಿಗೆ ಬಿದ್ದಿತ್ತು. ಆ ಸಂದರ್ಭ ಬೆಂಕಿ ಹತ್ತಿಕೊಂಡಿತ್ತು. ಬೀಳುವಾಗ ಇಬ್ಬಾಗಗೊಂಡ ವಿಮಾನದಿಂದ ಎಂಟು ಮಂದಿ ಜಿಗಿದು ಪಾರಾಗಿದ್ದರು. ದುರಂತದಲ್ಲಿ ಸಾವನ್ನಪ್ಪಿದ 22 ಮಂದಿಯ ಗುರುತೂ ಸಿಗದಂಥ ಪರಿಸ್ಥಿತಿ ಇತ್ತು. ಬಳಿಕ ಡಿ.ಎನ್.ಎ. ಪರೀಕ್ಷೆ ಮಾಡಿಸಲಾಯಿತು. ಇಂದು ಕುಳೂರು ನದಿ ತಟದಲ್ಲಿ ನಿರ್ಮಿಸಿದ ಸ್ಮಾರಕ ದಲ್ಲಿ ಮಡಿದವರಿಗೆ  ಶ್ರದ್ಧಾಂಜಲಿ ಜರಗಿತು.  ವಿಮಾನ ದುರಂತದಿಂದ ಕೆಲವರ ಮೃತದೇಹ ಗುರುತುಪತ್ತೆಯಾಗದೆ ಉಳಿದ ಸಂದರ್ಭ ಮಂಗಳೂರಿನ  ಕುಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಆ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ಅನ್ನು ನಿರ್ಮಿಸಲಾಗಿದೆ. ಅಲ್ಲಿ ಪ್ರತಿ ವರ್ಷ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿಯನ್ನು ಮೇ.22ರಂದು ಬೆಳಗ್ಗೆ ಸಲ್ಲಿಸಲಾಗುತ್ತದೆ.  ಈ ಸಂದರ್ಭ ದ.ಕ‌ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್  ಮಾತನಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು