News Karnataka Kannada
Friday, May 17 2024
ಕರಾವಳಿ

30ರಂದು ಬೈಂದೂರಿಗೆ ಸಿಎಂ ಆಗಮನ; ಮಧು ಬಂಗಾರಪ್ಪ ಪರ ಪ್ರಚಾರ

Photo Credit :

30ರಂದು ಬೈಂದೂರಿಗೆ ಸಿಎಂ ಆಗಮನ; ಮಧು ಬಂಗಾರಪ್ಪ ಪರ ಪ್ರಚಾರ

ಉಡುಪಿ: ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಹಿನ್ನೆಲೆ, ಮೈತ್ರಿ ಸರ್ಕಾರದ ಅಭ್ಯರ್ಥಿ ಮಧು ಬಂಗಾರಪ್ಪ ಪರ ಚುನಾವಣಾ ಪ್ರಚಾರ ನಡೆಸಲು ಸಿಎಂ ಕುಮಾರಸ್ವಾಮಿ ನಾಳೆ ಬೈಂದೂರಿಗೆ ಆಗಮಿಸಲಿದ್ದಾರೆ.

ಮಂಗಳವಾರ ಬೆಳಿಗ್ಗೆ ಬೈಂದೂರು ಸಮೀಪದ ಅರೆಶಿರೂರು ಹೆಲಿಪ್ಯಾಡ್ ಗೆ ಆಗಮಿಸುವ ಅವರು ಪಕ್ಷದ ವತಿಯಿಂದ ಆಯೋಜಿಸುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲಿದ್ದು, ಬಳಿಕ ಭದ್ರಾವತಿಗೆ ತೆರಳಲಿದ್ದಾರೆ.

ಒಂದೆಡೆ ಸಿಎಂ ಪ್ರಚಾರ ಸಭೆಗೆ ಆಗಮಿಸುವ ತವಕದಲ್ಲಿ ಕಾರ್ಯಕರ್ತರಿದ್ದು, ಇನ್ನೊಂದೆಡೆ ಸಿಎಂ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ‌. ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಗ್ಗೆ ಅಹೋರಾತ್ರಿ ಧರಣೆ ನಡೆಯುತ್ತಿದ್ದು, ಪ್ರತಿಭಟನಾಕಾರರು ಸಿಎಂ ಬರುವಿಕೆಗೆ ಒತ್ತಾಯಿಸಿದ್ದಾರೆ. ಪ್ರಚಾರ ಸಭೆಗೆ ಆಗಮಿಸುವ ಸಿಎಂ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಸಮಸ್ಯೆ ಇತ್ಯರ್ಥಗೊಳಿಸುವಂತೆ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
192
Shreyas Vittal

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು