News Karnataka Kannada
Monday, April 29 2024
ಕರಾವಳಿ

ಹಿಂದುಗಳಿಗೆ ದೇಗುಲಗಳ ನಿರ್ವಹಣೆ ಅಧಿಕಾರ:  ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಒತ್ತಾಯ

Authority to manage temples for Hindus: Pageavara Sri Vishwaprasannatirtha insists
Photo Credit : News Kannada

ಉಡುಪಿ: ದೇಗುಲಗಳ ನಿರ್ವಹಣೆಯನ್ನು ಸರಕಾರ ನಡೆಸದೆ ಹಿಂದುಗಳಿಗೆ ವಹಿಸಿಕೊಡಬೇಕು. ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿ ತರುವುದರ ಜೊತೆಗೆ ಗೋ ಸಂರಕ್ಷಣೆಗೆ ಪೂರಕ ಯೋಜನೆಗಳಿಗೆ ನೆರವು ನೀಡಬೇಕು. ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ ನೀಡಬೇಕು. ದೇವಸ್ಥಾನಗಳ ಭೂಮಿ ಅತಿಕ್ರಮಣ ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಕರಾವಳಿಯ ಸಾಧು ಸಂತರ ಸಮಾಲೋಚನೆ ಸಭೆಯ ಬಳಿಕ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜಕ್ಕೆ ಒಳಿತಾಗುವ ಬೇಡಿಕೆಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಸಲ್ಲಿಸಿದ್ದೇವೆ. ಮುಂದೆ ಅವರು ಅದನ್ನು ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶ್ರೀಗಳು, ಇನ್ನೊಂದು ಪಕ್ಷದವರು ಬಂದರು ಕೂಡ ನಾವು ಇದೇ ವಿಚಾರವನ್ನು ಅವರ ಮುಂದೆ ಇಡುತ್ತೇವೆ. ನಮಗೆ ಪಕ್ಷ ಮುಖ್ಯ ಅಲ್ಲ. ಸಮಾಜಕ್ಕೆ ಬೇಕಾಗಿರುವುದನ್ನು ನಾವು ಯಾವುದೇ ಸರಕಾರ, ಜನಪ್ರತಿನಿಧಿಗಳು ಬಂದರು ಕೂಡ ಈ ರೀತಿಯ ವಿಚಾರಗಳನ್ನು ಅವರ ಮುಂದೆ ಕೂಡ ಇಡುತ್ತೇವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು