Categories: ಕರಾವಳಿ

ಬೆಳ್ತಂಗಡಿ: ಚಾರ್ಮಾಡಿ, ಕಡಿರುದ್ಯಾವರದಲ್ಲಿ ಕಾಡಾನೆ ಹಾವಳಿ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ ಹಾಗೂ ಪುರುಷೋತ್ತಮ್ ಎಂಬುವರ ತೋಟದ 33 ಅಡಕೆ ಮರಗಳನ್ನು ಮುರಿದು ಹಾಕಿದೆ. ಕಾಡಾನೆಗಳು ಚಾರ್ಮಾಡಿ- ಕನಪಾಡಿ ಮೀಸಲು ಅರಣ್ಯದಿಂದ ಮೃತ್ಯುಂಜಯ ನದಿ ಮೂಲಕ ಆಗಮಿಸಿ, ಕೃಷಿ ನಾಶಗೊಳಿಸಿದ ಬಳಿಕ ಅದೇ ಹಾದಿಯಲ್ಲಿ ಅರಣ್ಯದ ಕಡೆ ನಿರ್ಗಮಿಸಿರುವ ಕುರುಹುಗಳು ಪತ್ತೆಯಾಗಿವೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಸರದಲ್ಲಿ ಪರಿಶೀಲನೆ ನಡೆಸಿ ಪರಿಹಾರ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಿದೆ.

ಕಡಿರುದ್ಯಾವರ ಒಂಟಿ ಸಲಗ: ಬುಧವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಸಿರಿಬೈಲು ಕಿರಣ ಹೆಬ್ಬಾರ್ ರವರ ತೋಟಕ್ಕೆ ದಾಳಿ ನಡೆಸಿದ ಒಂಟಿ ಸಲಗ ಸುಮಾರು 15ಕ್ಕಿಂತ ಅಧಿಕ ಬಾಳೆ ಗಿಡಗಳನ್ನು ಧ್ವಂಸಗೈದಿದೆ. ಕಳೆದ ಎರಡು ದಿನಗಳ ಹಿಂದೆ ಇಲ್ಲಿಗೆ ಸಮೀಪದ ಇನ್ನೊಬ್ಬ ಕೃಷಿಕರ ತೋಟಕ್ಕೆ ಒಂಟಿ ಸಲಗ ಆಗಮಿಸಿದ್ದರು ಹೆಚ್ಚಿನ ಕೃಷಿ ನಾಶ ಮಾಡಿರಲಿಲ್ಲ. ಬುಧವಾರ ಸಂಜೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಂಡು ಬಂದ ಒಂಟಿ ಸಲಗ ಹಲವು ಹೊತ್ತು ಟ್ರಾಫಿಕ್ ಜಾಮ್ ಗೆ ಕಾರಣವಾಗಿತ್ತು.

Umesha HS

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

28 mins ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

37 mins ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

1 hour ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

1 hour ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

2 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

2 hours ago