Categories: ಕರಾವಳಿ

ಬೆಳ್ತಂಗಡಿ ಆಸುಪಾಸು ತಂಪೆರದ ಮಳೆ, ಕೃಷಿಕರಿಗೆ ಕೊಂಚ ಸಮಾಧಾನ

ಬೆಳ್ತಂಗಡಿ:  ಕಳೆದ ಹಲವು ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಲಾಯಿಲ, ದಿಡುಪೆ, ನಡ,ಕಲ್ಮಂಜ, ಚಿಬಿದ್ರೆ, ಚಾರ್ಮಾಡಿ, ಕಡಿರುದ್ಯಾವರ ಮೊದಲಾದ ಗ್ರಾಮಗಳ ಜನತೆಗೆ ಮಂಗಳವಾರ ಸುರಿದ ಸಾಮಾನ್ಯ ಮಳೆ ಒಂದಿಷ್ಟು ತಂಪೆರೆಯಿತು.

ಸಂಜೆ 5ರ ಹೊತ್ತಿಗೆ ಆರಂಭವಾದ ಮಳೆ ಸುಮಾರು ಅರ್ಧ ಗಂಟೆ ಕಾಲ ಸಾಮಾನ್ಯವಾಗಿ ಸುರಿಯಿತು.ಉಳಿದ ಕೆಲವು‌ ಗ್ರಾಮಗಳಲ್ಲಿ ತುಂತುರು ಮಳೆ ಸುರಿದಿದೆ. ಏ.7ರಂದು ತಾಲೂಕಿನ ಹಲವೆಡೆ ಗಾಳಿ, ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿತ್ತು.ಮತ್ತೆ 18ದಿನಗಳ ಬಳಿಕ ಮಂಗಳವಾರ ಮಳೆ ಸುರಿದಿದೆ.

ಈಗಾಗಲೇ ತಾಲೂಕಿನ ಹಲವೆಡೆ ನೀರಿನ ತೊಂದರೆ ಕಂಡು ಬಂದಿದ್ದು ಜನತೆಗೆ ಸಮಸ್ಯೆ ಉಂಟಾಗಿತ್ತು. ನದಿ, ಕೆರೆ ಬತ್ತಿರುವ ಕಾರಣ ಹಲವು ಕೃಷಿ ತೋಟಗಳಿಗೂ ನೀರಾವರಿ ವ್ಯವಸ್ಥೆ ಇಲ್ಲದಾಗಿದೆ. ಮಂಗಳವಾರ ಕೆಲವೆಡೆ ಸುರಿದ ಮಳೆ ಜನರಲ್ಲಿ ಕೊಂಚ ಸಮಾಧಾನ ಮೂಡಿಸಿದೆ.

Umesha HS

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

30 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

31 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

50 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

54 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

59 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

1 hour ago