ಬೆಂಗಳೂರು/ ಧಾರವಾಡ: ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಳ್ಳಿ ಹಾಕಿದೆ. ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ 2023ರ ವಿಧಾನಸಭಾ ಚುನಾವಣೆಗೆ ವಿನಯ್ ಕುಲಕರ್ಣಿ ಸ್ಪರ್ಧೆ ನಡೆಸಿದ್ದು, ಅದಕ್ಕಾಗಿ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ವಿನಯ್ ಅವರು ಅರ್ಜಿ ಸಲ್ಲಿಸಿದ್ದರು.
ವಿನಯ್ ತಮಗೆ ಜಿಲ್ಲಾ ಪ್ರವೇಶ ನೀಡಬೇಕು ಎಂದು ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆಹೋಗಿದ್ದರು. ಆದರೆ, ಯಾವ ಕಾರಣಕ್ಕೂ ನಿರ್ಬಂಧ ಹಿಂಪಡೆಯಬಾರದು ಎಂದು ಸಿಬಿಐ ವಾದಿಸಿತ್ತು. 120 ಸಾಕ್ಷಿಗಳಲ್ಲಿ 90 ಮಂದಿ ಧಾರವಾಡದವರೇ ಆಗಿದ್ದಾರೆ. ಕ್ಷೇತ್ರಕ್ಕೆ ಪ್ರವೇಶ ಆದರೆ ಆದೇಶ ದುರುಪಯೋಗ ಆಗಬಹುದು, ಮುಂದಿನ ಹಂತದಲ್ಲಿ ಕೇಸ್ಗೆ ಸಮಸ್ಯೆ ಆಗಬಹುದು. ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂದು ಸಿಬಿಐ ವಾದಿಸಿತ್ತು. ಸಿಬಿಐ ವಾದ ಪುರಸ್ಕರಿಸಿ, ವಿನಯ್ ಕುಲಕರ್ಣಿ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ವಿನಯ ಕುಲಕರ್ಣಿ ಅವರಿಗೆ ಕಾಂಗ್ರೆಸ್ ಪಕ್ಷ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್ ನೀಡಿದೆ. ಹೀಗಾಗಿ ಚುನಾವಣೆ ಸ್ಪರ್ಧೆ ಕಾರಣದಿಂದ ಷರತ್ತು ಸಡಿಲಿಸಲು ಅವಕಾಶ ಕೋರಲಾಗಿತ್ತು. ಆದರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾಜಯಂತ್ ಕುಮಾರ್ ಇದನ್ನು ಒಪ್ಪಿಲ್ಲ.