ಮಂಗಳೂರು: ದೇರಳಕಟ್ಟೆ ಯೆನೆಪೋಯ ( ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ) ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚಿಸಲ್ಪಟ್ಟ ಮಾರ್ಗದರ್ಶನದಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಕಿಶೋರ್ ಕುಮಾರ್ , ಡಾ. ಜಗದೀಶ್ ಕೆ, ಜಿಲ್ಲಾ ಪರಿವೀಕ್ಷಣಾಧಿಕಾರಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಸೆಲ್ ನ ಕಾರ್ಯಕ್ರಮ ಅಧಿಕಾರಿಗಳು ತಂಬಾಕು ಮುಕ್ತ ಘೋಷಣಾ ಪತ್ರವನ್ನು ಯೆನೆಪೋಯ ( ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ) ಗೌರವಾನ್ವಿತ ಸಹ ಕುಲಾಧಿಪತಿ ಡಾ. ಬಿ. ಎಚ್. ಶ್ರೀಪತಿರಾವ್ ಅವರಿಗೆ ನೀಡಿದರು.
ಇದೆ ಸಂದರ್ಭದಲ್ಲಿ ಯೆನೆಪೋಯ ಸಂಸ್ಥೆಯ ಸೆಂಟರ್ ಫಾರ್ ಸಬುಸ್ಟೆನ್ಸ್ ಅಬ್ಯುಸ್ ಪ್ರಿವೆಂಷನ್ ನ ಎಲ್ಲಾ ಸಿಬ್ಬಂದಿಗಳ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಇಡೀ ಕರ್ನಾಟಕದಲ್ಲಿಯೇ ಪ್ರಥಮ ತಂಬಾಕು ಮುಕ್ತ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ )ಪಾತ್ರವಾಗಿದೆ ಎಂದರು. ಡಾ. ಲಕ್ಷ್ಮಿಕಾಂತ್ ಚಾತ್ರ, ಪ್ರಾ೦ಶುಪಾಲರು, ಡಾ. ಶಾಮ್ ಎಸ್ ಭಟ್, ಡೀನ್, ಯೆನೆಪೋಯ ದಂತ ಮಹಾವಿದ್ಯಾಲಯ, ಡಾ. ಮಾಜಿ ಜೋಸ್, ಸಹ ನಿರ್ದೇಶಕರು, ಸೆಂಟರ್ ಫಾರ್ ಸಬುಸ್ಟೆನ್ಸ್ ಅಬ್ಯುಸ್ ಪ್ರಿವೆಂಷನ್, ಡಾ. ಶ್ರುತಿ ನಾಯಕ್, ಸಂಚಾಲಕರು, ಪುಂಡಲೀಕ ಲಕತಿ, ಜಿಲ್ಲಾ ಪರಿಶೀಲನೆಗಾರ, ಶ್ರುತಿ ಸಾಲಿಯಾನ್, ಸಮಾಜ ಸೇವಕರು, ಜಿಲ್ಲಾ ತಂಬಾಕು ನಿಯಂತ್ರಣ ಸೆಲ್ ಮತ್ತು ಜ್ಯೋತಿ ಉಳೆಪಾಡಿ, ಜಿಲ್ಲಾ ಆರೋಗ್ಯ ಶಿಕ್ಷಣದ ಮುಖ್ಯಸ್ಥರು ಉಪಸ್ಥಿತರಿದ್ದರು.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…
ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…
ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…
ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…
ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…