ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರಸ್ ಪಕ್ಷದ ಮೊದಲ ಪಟ್ಟಿ ಸಿದ್ಧವಾಗಿದ್ದು, ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೇಟ್ ಘೋಷಣೆಯಾಗಿದೆ. ಪ್ರಮುಖ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೇಟ್ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ ಅವರ ಪುತ್ರ ದರ್ಶನ ಅವರಿಗೆ ಟಿಕೇಟ್ ನೀಡಲಾಗಿದೆ. ಕನಕಪುರದಿಂದ ಡಿಕೆಶಿ ಸ್ಪರ್ಧೆ ಮಾಡಲಿದ್ದಾರೆ. ದೇವನಹಳ್ಳಿ ಕ್ಷೇತ್ರದಿಂದ ಎಚ್. ಸಿ ಮಹದೇವಪ್ಪ ಅವರಿಗೆ ಟಿಕೇಟ್ ದೊರೆತಿದೆ. ದಿನೇಶ್ ಗುಂಡೂರಾವ್ ಬಿಟಿಎಂ ಲೇಔಟ್, ರಾಮನಗರದಿಂದ ಇಕ್ಬಾಲ್ ಅವರಿಗೆ ಟಿಕೇಟ್ ದೊರೆತಿದೆ.
ಕರಾವಳಿಯಲ್ಲಿ ಕಾಪು ಕ್ಷೇತ್ರಕ್ಕೆ ವಿನಯ್ ಕುಮಾರ್ ಸೊರಕೆ, ಕುಂದಾಪುರಕ್ಕೆ ದಿನೇಶ್ ಹೆಗ್ಡೆ. ಬೈಂದೂರಿನಿಂದ ಗೋಪಾಲ ಪೂಜಾರಿ ಅವರಿಗೆ ಟಿಕೇಟ್ ನೀಡಲಾಗಿದೆ. ಶೃಂಗೇರಿ ಟಿ.ಡಿ ರಾಜೇಗೌಡ ಅವರಿಗೆ ಟಿಕೇಟ್ ದೊರೆತಿದೆ. ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿ ರಕ್ಷಿತ್ ಶಿವರಾಮ್., ಉಳ್ಳಾಲ ಕ್ಷೇತ್ರದಿಂದ ಯು.ಟಿ ಖಾದರ್, ಬಂಟ್ವಾಳದಿಂದ ರಮಾನಾಥ ರೈ, ಸುಳ್ಯ ಕ್ಷೇತ್ರದಿಂದ ಕೃಷ್ಣಪ್ಪ ಜಿ.