ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯಲ್ಲಿ ಸಾವಿರಾರು ಮೀನುಗಳು ಸತ್ತಿರುವ ಘಟನೆ ವರದಿಯಾಗಿದೆ.
ಒಂದು ಕಡೆ ನೀರಿನ ಹರಿವಿನ ಪ್ರಮಾಣ ಕಡಮೆಯಾಗಿರುವುದು ಹಾಗೂ ನೀರಿಗೆ ಒಳಚರಂಡಿ ನೀರು ಸೇರುತ್ತಿರುವುದು ಕಂಡು ಬಂದಿದ್ದು ಇದರಿಂದ ಸಾವಿರಾರು ಜಲಚರಗಳು ಸತ್ತಿರುವುದು ಕಂಡು ಬಂದಿದೆ. ಮೀನುಗಳು ಸತ್ತು ತೆಲುತ್ತಿದೆ. ಇದರಿಂದಾಗಿ ಭಾರಿ ವಾಸನೆಯೂ ಬರುತ್ತಿದೆ. ನದಿಯ ಇಕ್ಕೆಲದ ಮನೆಯವರು ಮೂಗು ಮುಚ್ಚುವ ಪರಿಸ್ಥಿತಿ ಬಂದೊದಗಿದೆ.
ಒಂದು ಕಡೆ ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಎದುರಾಗಿದೆ. ಇದಲ್ಲದೆ ಇದೇ ನೀರು ಕುಮಾರಧಾರ ನದಿ ಸೇರಿ ಸ್ನಾನ ಘಟ್ಟವು ಮಲಿನವಾಗಲು ಪ್ರಾರಂಭವಾಗಿದೆ.