News Karnataka Kannada
Sunday, April 28 2024
ಕರಾವಳಿ

ಪತ್ರಕರ್ತ ಸೌರಭ ಪ್ರಶಸ್ತಿಗೆ ಜಯಾನಂದ ಪೆರಾಜೆ ಆಯ್ಕೆ

Jayanand Peraje selected for Journalist Sourabha Award
Photo Credit : News Kannada

ಬಂಟ್ವಾಳ:  ಹೂವಿನಹಡಗಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಕೊಡಮಾಡುವ ರಾಜ್ಯ ಮಟ್ಟದ ಪತ್ರಕರ್ತ ಸೌರಭ ಪ್ರಶಸ್ತಿ 2023 ಪ್ರಶಸ್ತಿಗೆ ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧು ನಾಯ್ಕ ಹೂವಿನಹಡಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಯಾನಂದ ಪೆರಾಜೆಯವರು 1986 ರಲ್ಲಿ ಸುದ್ದಿ ಬಿಡುಗಡೆ ವಾರ ಪತ್ರಿಕೆ ಬಂಟ್ವಾಳದಲ್ಲಿ ವರದಿಗಾರರಾಗಿ ಕಾರ್ಯಾರಂಭಿಸಿ ಬಳಿಕ ಹೊಸದಿಗಂತ, ಮುಂಗಾರು, ಸಂಯುಕ್ತ ಕರ್ನಾಟಕ ಕನ್ನಡ ಪ್ರಭ ದಿನಪತ್ರಿಕೆಗಳಲ್ಲಿ ಸುದೀರ್ಘ ಕಾಲ ಬಂಟ್ವಾಳ ತಾಲೂಕು ವರದಿಗಾರರಾಗಿ ಸೇವೆಸಲ್ಲಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಅಂಕಣಕಾರರಾಗಿ, ಕವಿ, ಸಾಹಿತಿಯಾಗಿ ಲೇಖನಗಳನ್ನು ಪ್ರಕಟಿಸಿರುತ್ತಾರೆ. ಹೊಸದಿಗಂತ ಪತ್ರಿಕೆ ವರದಿಗಾರರಾಗಿ ಅರುವ ಅವರು ಪ್ರಸ್ತುತ ಮಧುಪ್ರಪಂಚ ತ್ರೈಮಾಸಿಕ ಪತ್ರಿಕೆಯ ಸಂಪಾದಕರಾಗಿರುತ್ತಾರೆ. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಬರಹಗಾರರ ವೇದಿಕೆಯ ಜಿಲ್ಲಾಧ್ಯಕ್ಷರಾಗಿರುತ್ತಾರೆ. ಫೆ.26ರಂದು ವಿಜಯಪುರದ ಹಂಪಿಯಲ್ಲಿ ನಡೆಯುವ ರಾಜ್ಯ ಸಮ್ಮೇಳನ ಮತ್ತು ಸಾವಿರ ಗೋಷ್ಠಿಯ ಸಂಭ್ರಮ ಕಾಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಮಾಡಲಾಗುವುದು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಜಿಲ್ಲಾ ಘಟಕದ ಸಹಯೋಗದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕಾರ ನಡೆಯಲಿದೆ ಎಂದವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು