ಮಂಗಳೂರು: ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆ ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಡಿಡಿಪಿಐ ವರದಿ ಮೇಲೆ ಪ್ರಾಥಮಿಕ ತನಿಖೆ ಮುಂದುವರೆದಿದೆ.
ಜೆರೋಸಾ ಶಾಲೆಯ ಏಳನೇ ತರಗತಿ ಮಕ್ಕಳ ಹೇಳಿಕೆ ಹಾಗೂ ಪೋಷಕರ ಹೇಳಿಕೆಯನ್ನು ದಾಖಲಿಸಿರೋ ಶಿಕ್ಷಣಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಲಿಖಿತ ಹೇಳಿಕೆಗಳನ್ನು ಐಎಎಸ್ ಅಧಿಕಾರಿ ಡಾ.ಆಕಾಶ್.ಎಸ್ ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಲ್ಲಿಸಿದ್ದಾರೆ. ಶಾಲೆಯಲ್ಲೇ ಕಳೆದ ಶನಿವಾರ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಮಕ್ಕಳು ಹಾಗೂ ಪೋಷಕರ ಲಿಖಿತ ಹೇಳಿಕೆಗಳನ್ನು ಪಡೆಯಲಾಗಿತ್ತು.
ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತರಿಂದ ಡಿಡಿಪಿಐ ಕಚೇರಿಯಲ್ಲಿ ತನಿಖೆ ನಡೆಯುತ್ತಿದೆ. ದಕ್ಷಿಣಕನ್ನಡ ಡಿ.ಡಿ.ಪಿ.ಐ ವೆಂಕಟೇಶ ಸುಬ್ರಾಯ ಪಟಗಾರರಿಂದ ಮಾಹಿತಿ ಸಂಗ್ರಹವಾಗಿದೆ. ಇಲ್ಲಿ ಮಕ್ಕಳ ಮತ್ತು ಪೋಷಕರ ಲಿಖಿತ ಹೇಳಿಕೆಗಳ ವ್ಯತ್ಯಾಸಗಳ ಆಧಾರದಲ್ಲಿ ತನಿಖೆ ನಡೆಯುತ್ತಿದೆ. ಜೊತೆಗೆ ಬೆಳಗ್ಗಿನಿಂದಲೇ ಡಿಡಿಪಿಐ ಕಚೇರಿಯಲ್ಲಿ ಶಿಕ್ಷಕರು ಹಾಗೂ ಮಕ್ಕಳ ಹೇಳಿಕೆಗಳ ಸೂಕ್ಷ್ಮ ಪರಿಶೀಲನೆ ಮುಂದುವರೆದಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…