News Karnataka Kannada
Monday, May 06 2024
ಕರಾವಳಿ

ಮಂಗಳೂರಿನಲ್ಲಿ “ಟಿಪ್ಪು ಸುಲ್ತಾನ್” ಕಟ್ ಔಟ್ ಕಿರಿಕ್ !

ನಗರದಲ್ಲೂ ಟಿಪ್ಪು ಸುಲ್ತಾನ್ ಕಟ್ ಔಟ್ ವಿವಾದ ಹುಟ್ಟಿಕೊಂಡಿದೆ. ಹೌದು. . ಮಂಗಳೂರಿನ ಹರೇಕಳ ಎಂಬಲ್ಲಿ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಕಟ್ ಔಟ್ ನಿಲ್ಲಿಸಿದ್ದರು. ಇದನ್ನು ತೆರವುಗೊಳಿಸಲು ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಈ ನೋಟಿಸ್‌ ಅನ್ನು ಖಂಡಿಸಿ ಡಿವೈಎಫ್ಐ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Photo Credit : News Kannada

ಮಂಗಳೂರು: ನಗರದಲ್ಲೂ ಟಿಪ್ಪು ಸುಲ್ತಾನ್ ಕಟ್ ಔಟ್ ವಿವಾದ ಹುಟ್ಟಿಕೊಂಡಿದೆ. ಹೌದು. . ಮಂಗಳೂರಿನ ಹರೇಕಳ ಎಂಬಲ್ಲಿ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಕಟ್ ಔಟ್ ನಿಲ್ಲಿಸಿದ್ದರು. ಇದನ್ನು ತೆರವುಗೊಳಿಸಲು ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಈ ನೋಟಿಸ್‌ ಅನ್ನು ಖಂಡಿಸಿ ಡಿವೈಎಫ್ಐ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿವೈಎಫ್ಐ ಸಂಘಟನೆಯ ರಾಜ್ಯ ಸಮ್ಮೇಳನದ ಪ್ರಯುಕ್ತ ವಿವಿಧ ವೀರ ಯೋಧರ, ಸ್ವತಂತ್ರ ಸೇನಾನಿಗಳ ಫ್ಲೆಕ್ಸ್ ಕಟ್ ಔಟ್ ಅಳವಡಿಸಿದ್ದರು. ಕಟ್ ಔಟ್ ಅಳವಡಿಸಿದ ಬೆನ್ನಲ್ಲೇ ತೆರವುಗೊಳಿಸಲು ಪೊಲೀಸರು ನೋಟಿಸ್‌ ನೀಡಿದ್ದಾರೆ. ಆದರೆ ಕಟ್ ಔಟ್ ತೆರವುಗೊಳಿಸಲು ಡಿವೈಎಫ್ ಐ ಕಾರ್ಯಕರ್ತರು ನಕಾರ ಮಾಡಿದ್ದಾರೆ.

ಟಿಪ್ಪು ಸುಲ್ತಾನ್ ಕಟ್ ಔಟ್ ಅಳವಡಿಸಲು ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧವಿದೆಯೇ ಎಂದು ಪ್ರಶ್ನೆ ಹಾಕಿದ್ದಾರೆ. ಅಲ್ಲದೇ ನಿಷೇಧ ಹೇರಿದ ಸರಕಾರ ಯಾವುದು ? ದಕ್ಷಿಣ ಕನ್ನಡ ಜಿಲ್ಲೆಯಲಿ ಇನ್ನೂ ಬಿಜೆಪಿ ಸರಕಾರ ಇದೆಯಾ ..? ಕಾಂಗ್ರೆಸ್ ಸರಕಾರದ ಅವಧಿಯಲ್ಲೂ ಪೊಲೀಸರಿಂದ ಸಂಘಿ ಮನಸ್ಥಿತಿಯಿಂದ ಕೆಲಸ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಹೀಗಾಗಿ ಕಟ್ ಔಟ್ ತೆರವುಗೊಳಿಸುವ ಪ್ರಶ್ನೆಯೇ ಇಲ್ಲ. ಎಲ್ಲಾ ಮಹಾತ್ಮರ ಬ್ಯಾನರ್ ಗೆ ಡಿವೈಎಫ್ಐ ಕಾರ್ಯಕರ್ತರು ಕಾವಲು ನಿಲ್ಲುತ್ತಾರೆ ಎಂದು ಡಿವೈಎಫ್ಐ ಮುಖಂಡ ಇಮ್ತಿಯಾಜ್ ಪ್ರಕಟಣೆ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು