ಕಾಸರಗೋಡು : ಕೊರೊನಾ ರೂಪಾಂತರಿ ಓಮಿಕ್ರಾನ್ ಭೀತಿಯಿಂದಾಗಿ ಕೇರಳದಲ್ಲಿ ಇಂದು (30 ರಿಂದ) ರಾತ್ರಿಯಿಂದ ಜನವರಿ 2ರವರೆಗೂ ನೈಟ್ ಕರ್ಫ್ಯೂ ವಿಧಿಸಲಾಗಿದೆ.
ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ನೈಟ್ ಕರ್ಫ್ಯೂಗೊಳಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಅದರಂತೆ ಡಿಸೆಂಬರ್ 30 ರಿಂದ ಬಾರ್ಗಳು, ಹೋಟೆಲ್ಗಳು, ಕ್ಲಬ್ಗಳು ಮತ್ತು ರೆಸ್ಟೋರೆಂಟ್ ಸೇರಿದಂತೆ ಯಾವುದೇ ಅಂಗಡಿಗಳು ರಾತ್ರಿ 10 ಗಂಟೆ ಯಿಂದ ಬೆಳಿಗ್ಗೆ 5 ಗಂಟೆ ತನಕ ಕಾರ್ಯನಿರ್ವಹಿಸುವಂತಿಲ್ಲ.
ಬೀಚ್ , ಶಾಪಿಂಗ್ ಮಾಲ್, ಸಾರ್ವಜನಿಕ ಉದ್ಯಾನವನ ಸೇರಿದಂತೆ ಇತರ ಸ್ಥಳಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ ಶಬರಿಮಲೆ ಮತ್ತು ಶಿವಗಿರಿ ದೇವಸ್ಥಾನಕ್ಕೆ ತೆರಳುವವರಿಗೆ ವಿನಾಯಿತಿ ನೀಡಲಾಗಿದೆ.
ರಾತ್ರಿ 10 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಕ್ಕೂ ನಿರ್ಬಂಧ ವಿಧಿಸಲಾಗಿದೆ. ವಿವಾಹ , ರಾಜಕೀಯ , ಸಾಂಸ್ಕೃತಿಕ ಸೇರಿದಂತೆ ಎಲ್ಲಾ ಕಾರ್ಯಕ್ರಗಳು ರಾತ್ರಿ ಹತ್ತು ಗಂಟೆ ಬಳಿಕ ನಡೆಸುವಂತಿಲ್ಲ. ಈ ಬಗ್ಗೆ ಪೊಲೀಸರು ವಿಶೇಷ ನಿಗಾ ಇರಿಸಲಿದ್ದಾರೆ. ಸೋಂಕಿನ ಪ್ರಮಾಣ ಏರಿಕೆಯಾದಲ್ಲಿ ಜನವರಿ ಎರಡರ ಬಳಿಕವೂ ರಾತ್ರಿ ಕರ್ಫ್ಯೂ ಮುಂದುವರಿಸುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ
ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…
ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…
ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…