ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಹಳೆಯ ಚಿನ್ನಾಭರಣ ಸಹಿತ ಮಹಾರಾಷ್ಟ್ರ ಮೂಲದ ಇಬ್ಬರನ್ನು ಮಂಜೇಶ್ವರ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1. 3 ಕಿಲೋ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಮೂಲದ ಗೋರತ್ ಪಾಟೀಲ್ ( 45) ಮತ್ತು ಸದಾಶಿವ( 42) ಬಂಧಿತರು. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಉಪ್ಪಳ ಕೈಕಂಬದಿಂದ ಇವರು ಸಂಚರಿಸುತ್ತಿದ್ದ ಕಾರನ್ನು ವಶಪಡಿಸಿ ನಡೆಸಿದಾಗ ಕಾರಿನಲ್ಲಿ ಎರಡು ಚಿನ್ನದ ಬಿಲ್ಲೆಗಳು ಪತ್ತೆಯಾಗಿವೆ.
ಹಳೆಯ ಚಿನ್ನಾಭರಣ ಗಳನ್ನು ಪಡೆದು ಮಾರಾಟ ಮಾಡುವ ತಂಡದವ ರಾ ಗಿರಬಹುದು ಎಂದು ಪೊಲೀಸರು ಸಂಶಯಿಸಿದ್ದಾರೆ.