News Karnataka Kannada
Friday, May 17 2024
ಕಾಸರಗೋಡು

ಕಾಸರಗೋಡಿನ‌ ಗಡಿನಾಡಿಗರಿಗೆ ಆರ್ ಟಿ ಪಿ ಸಿ ಆರ್ ಟೆಸ್ಟಿನಿಂದ ವಿನಾಯಿತಿಗೆ ಮನವಿ

Photo Credit :

ಕಾಸರಗೋಡು : ಕಾಸರಗೋಡಿನ‌ ಗಡಿನಾಡಿಗರಿಗೆ ಆರ್ ಟಿ ಪಿ ಸಿ ಆರ್ ಟೆಸ್ಟಿನಿಂದ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು  ಕಾಸರಗೋಡು ಜಿಲ್ಲೆಯ ದಕ್ಷಿಣಕನ್ನಡ ಅವಲಂಬಿತ ಗಡಿನಾಡಿಗರ  ತಂಡವಾದ “ಸಹಯಾತ್ರಿ” ಯು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಇಂದು ಮನವಿ ಮಾಡಿತು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು ಕಾಸರಗೋಡು ಜಿಲ್ಲೆಯ ಕೊರೋನ ಟೆಸ್ಟ್‌ ಪೊಸಿಟಿವಿಟಿ ರೇಟಿನ ಆಧಾರದಲ್ಲಿ  ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕಾಸರಗೋಡಿನ ಸಾವಿರಾರು ಮಂದಿ ಜನರು  ಉದ್ಯೋಗ, ವಿದ್ಯಾಭ್ಯಾಸ, ವೈದ್ಯಕೀಯ ಹಾಗೂ ವ್ಯಾಪಾರ ವಹಿವಾಟುಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಅವಲಂಬಿಸಿದ್ದು . ಕರ್ನಾಟಕ ಸರಕಾರವು ಕಾಸರಗೋಡಿಗರಿಗೆ ದಕ್ಷಿಣ ಕನ್ನಡಕ್ಕೆ ಪ್ರವೇಶಿಸಲು  ಆರ್ ಟಿ ಪಿ ಸಿ ಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದ್ದು, ಕಳೆದ ಒಂದೂವರೆ ತಿಂಗಳಲ್ಲಿ  ನೆಗೆಟಿವ್ ರಿಪೋರ್ಟ್ ಅನ್ನು ಹಾಜರಿಪಡಿಸಿದವರಿಗೆ ಮಾತ್ರ ಕರ್ನಾಟಕಕ್ಕೆ ಪ್ರವೇಶವನ್ನು ನೀಡುತ್ತಿದೆ. ದ.ಕ ಜಿಲ್ಲೆಗೆ  ಉದ್ಯೋಗ ನಿಮಿತ್ತ ನಿತ್ಯ ಬರಬೇಕಾದ ಕಾಸರಗೋಡಿಗರು ತಿಂಗಳಲ್ಲಿ ನಾಲ್ಕು ಬಾರಿ ಕರೋನಾ ಟೆಸ್ಟ್ ಮಾಡಿಸಿಕೊಳ್ಳಬೇಕಾಗುತ್ತಿದೆ. ಇದೀಗ ಶಾಲಾ ಕಾಲೇಜುಗಳು ಆರಂಭವಾಗಿದ್ದು ದ.ಕ. ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಕಾಸರಗೋಡಿನ  ವಿದ್ಯಾರ್ಥಿಗಳು ಕೂಡಾ ಪ್ರತೀ ವಾರ ಕರೋನಾ ಟೆಸ್ಟ್ ಗೆ ಒಳಪಡಬೇಕಾಗುತ್ತಿದೆ.  ಅರ್ ಟಿ ಪಿ‌ ಸಿ ಆರ್ ಕಟ್ಟುಪಾಡುಗಳಿಂದ ಗಡಿನಾಡಿನ ಉದ್ಯೋಗ, ವಿದ್ಯಾರ್ಥಿ ಹಾಗೂ ವ್ಯಾಪಾರ ಮಾತ್ರವಲ್ಲದೆ ತುರ್ತು ವೈದ್ಯಕೀಯ ಸೇವೆಗಳಿಗೆ ತೆರಳುವವರಿಗೆ ಗಡಿ ಸಂಚಾರ ಮುಕ್ತಗೊಳಿಸಬೇಕು ಎಂಬ ಬೇಡಿಕೆಗಳನ್ನು ಸಹಯಾತ್ರಿ ತಂಡ ಜಿಲ್ಲಾಧಿಕಾರಿಗಳಿಗೆ ನೀಡಿದೆ.
ಸಹಯಾತ್ರಿ ತಂಡದ ಲೋಕೇಶ್ ಜೋಡುಕಲ್ಲು, ಕೃಷ್ಣ ಕಿಶೋರ್  ಏನಂಕೂಡ್ಲು, ಶಿವಕೃಷ್ಣ ನಿಡುವಜೆ ಹಾಗೂ ಗಣೇಶ್ ಭಟ್ ವಾರಣಾಸಿ  ಸಹಯಾತ್ರಿಯ ಪರವಾಗಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು