ಕಾಸರಗೋಡು: ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ ಉಂಟಾದ ಘಟನೆ ಮಂಜೇಶ್ವರದ ಹೊಸಂಗಡಿಯಲ್ಲಿ ನಡೆದಿದ್ದು , ರಿಕ್ಷಾಗಳು ಅಗ್ನಿಗಾಹುತಿಯಾಗಿದೆ.
ಹೊಸಂಗಡಿ ಅಂಗಡಿಪದವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಆಂಜನೇಯ ಎಂಬ ಗ್ಯಾರೇಜ್ ನಲ್ಲಿ ಬುಧವಾರ ಬೆಳಿಗ್ಗೆ ಅಗ್ನಿ ಅನಾಹುತ ಉಂಟಾಗಿದ್ದು , ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಿದರು . ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಕಾಸರಗೋಡು: ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.