ಕಾಸರಗೋಡು : ನಿಯಂತ್ರಣ ತಪ್ಪಿದ ಕಾರು ಬಾವಿಗೆ ಬಿದ್ದ ಘಟನೆ ಬೇಕಲ ಸಮೀಪದ ಪೂಚಕ್ಕಾಡ್ ಎಂಬಲ್ಲಿ ಇಂದು ಸಂಜೆ ನಡೆದಿದ್ದು , ಕಾರಲ್ಲಿದ್ದ ನಾಲ್ವರು ಪವಾಡ ಸದೃಶ ವಾಗಿ ಪಾರಾಗಿದ್ದಾರೆ .
ಸಂಜೆ ಐದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾವಿಯಲ್ಲಿ ಸಿಲುಕಿದ್ದ ನಾಲ್ವರನ್ನು ಪರಿಸರವಾಸಿಗಳು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದರು.
ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಆವರಣ ಇಲ್ಲದ ಬಾವಿಗೆ ಬಿದ್ದಿದ್ದು , ಇದನ್ನು ಗಮನಿಸಿದ ಪರಿಸರವಾಸಿಗಳು ಕೂಡಲೇ ಕಾರ್ಯಾಚರಣೆ ನಡೆಸಿದ್ದು , ಮೂವರನ್ನು ಪರಿಸರದ ಯುವಕರು ಕಾರಿನಿಂದ ಹೊರತೆಗೆದು ಮೇಲಕ್ಕೆತ್ತಿದರು.
ಓರ್ವನನ್ನು ಅಗ್ನಿಶಾಮಕ ದಳದ ಸಿಬಂದಿಗಳು ರಕ್ಷಿಸಿದರು . ಬಾವಿಗೆ ಬಿದ್ದ ಕಾರು ಅರ್ಧ ಮುಳುಗಿದ ಸ್ಥಿತಿಯಲ್ಲಿತ್ತು . ಕಾರಿನ ಗಾಜು ಹಾಗೂ ಬಾಗಿಲು ಒಡೆದು ನಾಲ್ವರನ್ನು ಹೊರೆತೆಗೆದು ಮೇಲಕ್ಕೆ ತಂದು ರಕ್ಷಿಸಲಾಯಿತು . ಕಾರಲ್ಲಿದ್ದವರು ಉದುಮ ನಿವಾಸಿ ಗಳಾಗಿದ್ದಾರೆ . ಕಾರನ್ನು ಕ್ರೇನ್ ಬಳಸಿ ಹೊರತೆಗೆಯಲಾಯಿತು