ಕಾಸರಗೋಡು : ಬೈಕ್ ಮತ್ತು ಟ್ಯಾಂಕರ್ ನಡುವೆ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಆದಿತ್ಯವಾರ ಬೆಳಿಗ್ಗೆ ನಗರದ ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ನಡೆದಿದೆ.
ನುಳ್ಳಿ ಪ್ಪಾಡಿ ಯ ಅಬ್ದುಲ್ ಮಜೀದ್ (42) ಮೃತ ಪಟ್ಟವರು. ನಗರದ ಹೊಸ ಬಸ್ಸು ನಿಲ್ದಾಣ ಪರಿಸರದ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಜೀದ್ ರನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸ ಲಾಗಳಿಲ್ಲ.
ಕಾಸರಗೋಡು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಟ್ಯಾಂಕರ್ ಚಾಲಕ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮೃತದೇಹ ವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಲ್ಲಿ ರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು ಎಂದು ಪೊಲೀಸ ರು ತಿಳಿಸಿದ್ದಾರೆ.