ಕಾಸರಗೋಡು : ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಗೆಯಲ್ಪಟ್ಟ ಸವಾರನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸವಾರ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ಮೇಲ್ಸೇತುವೆಯಲ್ಲಿ ನಡೆದಿದೆ.
ಆರಾಯಿ ಪುದುಕೈ ಯ ಬಿ .ಕೆ ಸಜಿತ್ ( ೨೦) ಮೃತಪಟ್ಟವ ರು . ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದರು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಮಳೆಯಿಂದ ಬೈಕ್ ಸ್ಕಿಡ್ ಆಗಿ ಸಜಿತ್ ರಸ್ತೆಗೆಸೆಯಲ್ಪಟ್ಟಿದ್ದು , ಈ ಸಂದರ್ಭದಲ್ಲಿ ಅತೀ ವೇಗದಿಂದ ಬಂದ ಟ್ಯಾಂಕರ್ ದೇಹದ ಮೇಲೆ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ