ಕಾಸರಗೋಡು : ಸಹೋದರರೊಳಗಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಗೊಂಡ ಘಟನೆ ಸೋಮವಾರ ರಾತ್ರಿ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ.
ಉಪ್ಪಳಿಗೆಯ ಥೋಮಸ್ ಡಿ ಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಇಬ್ಬರ ನಡುವೆ, ಜಗಳವಾಗಿದ್ದು ತಡೆಯಲು ಬಂದ ಥೋಮಸ್ ನ ಸಂಬಂಧಿಕ ವಿಲ್ಫ್ರೆಡ್ ಗೂ ಗಾಯಗಳಾಗಿವೆ.
ಜಗಳ ವಿಕೋಪಕ್ಕೆ ತಿರುಗಿ ರಾಜೇಶ್ ಥೋಮಸ್ ನನ್ನು ಇರಿದಿದ್ದು, ಬೊಬ್ಬೆ ಕೇಳಿ ಪರಿಸರ ವಾಸಿಗಳು ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಥೋಮಸ್ ರನ್ನು ಕಾಸರಗೋಡು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ . ರಾಜೇಶ್ ಬದಿಯಡ್ಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ .
ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ವಿಲ್ಫ್ರೆಡ್ ನನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ