News Karnataka Kannada
Friday, May 10 2024
ಕಾಸರಗೋಡು

ಕಾಸರಗೋಡು: ಸಹೋದರರೊಳಗಿನ ಜಗಳ ಕೊಲೆಯಲ್ಲಿ ಅಂತ್ಯ

Murder
Photo Credit :

ಕಾಸರಗೋಡು : ಸಹೋದರರೊಳಗಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಗೊಂಡ ಘಟನೆ ಸೋಮವಾರ ರಾತ್ರಿ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ.

ಉಪ್ಪಳಿಗೆಯ ಥೋಮಸ್ ಡಿ ಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಇಬ್ಬರ ನಡುವೆ, ಜಗಳವಾಗಿದ್ದು ತಡೆಯಲು ಬಂದ ಥೋಮಸ್ ನ ಸಂಬಂಧಿಕ ವಿಲ್ಫ್ರೆಡ್ ಗೂ ಗಾಯಗಳಾಗಿವೆ.

ಜಗಳ ವಿಕೋಪಕ್ಕೆ ತಿರುಗಿ ರಾಜೇಶ್  ಥೋಮಸ್ ನನ್ನು ಇರಿದಿದ್ದು, ಬೊಬ್ಬೆ ಕೇಳಿ ಪರಿಸರ ವಾಸಿಗಳು ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಥೋಮಸ್ ರನ್ನು ಕಾಸರಗೋಡು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ . ರಾಜೇಶ್ ಬದಿಯಡ್ಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ .

ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ವಿಲ್ಫ್ರೆಡ್ ನನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು